Posts Slider

Karnataka Voice

Latest Kannada News

ವಿನಯ ಕುಲಕರ್ಣಿ, ಪ್ರಸಾದ ಅಬ್ಬಯ್ಯ, ಜಿ.ಎಸ್.ಪಾಟೀಲ್ ಸೇರಿ 35 ಶಾಸಕರಿಗೆ “ನಿಗಮ ಭಾಗ್ಯ”…

1 min read
Spread the love

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ದಿನೇ ದಿನೇ ವಿಳಂಬವಾಗುತ್ತಲೇ ನಡೆದಿತ್ತು. ಇಂದು ಕೊನೆಗೂ ಲಿಸ್ಟ್ ಹೊರ ಬಿದ್ದಿದೆ.

ಧಾರವಾಡ-71 ಕ್ಷೇತ್ರದ ಶಾಸಕ ವಿನಯ ಕುಲಕರ್ಣಿ ಅವರನ್ನ ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಪ್ರಸಾದ ಅಬ್ಬಯ್ಯ ಅವರನ್ನ ಕರ್ನಾಟಕ ಒಳಚರಂಡಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಅವರನ್ನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ರಾಜಕೀಯ  ಸಲಹೆಗಾರರನ್ನಾಗಿ ಮಾಡಲಾಗಿದೆ. ರೋಣ ಶಾಸಕ ಜಿ.ಎಸ್.ಪಾಟೀಲ ಅವರಿಗೆ ಕರ್ನಾಟಕ ಖನಿಜ ನಿಗಮ ನೀಡಲಾಗಿದೆ.


Spread the love

Leave a Reply

Your email address will not be published. Required fields are marked *