Karnataka Voice

Latest Kannada News

ಮಹಾರಾಷ್ಟ್ರಕ್ಕೆ ಬಿಜೆಪಿಯ ಮುಖ್ಯಮಂತ್ರಿ ಪಡ್ನವೀಸ್…!!!

Spread the love

ಬಾಂಬೆ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗ್ತಾರೆ ಅನ್ನೋ ಕುತೂಹಲಗಳಿಗೆ ಕೊನೆಗೂ ತೆರೆ ಬಿದ್ದಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ದೇವೇಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ನೇತೃತ್ವದಲ್ಲಿ ದೇವೇಂದ್ರ ಫಡ್ನವಿಸ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ.

ಫಡ್ನವಿಸ್ ನಾಳೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ, ಎನ್​ಸಿಪಿ ಅಜಿತ್ ಪವಾರ್​ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ. ಫಡ್ನವಿಸ್, ಶಿಂಧೆ, ಪವಾರ್ ಅವರು ನಾಳೆ ಮುಂಬೈನಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದು 11 ದಿನಗಳಾದರೂ ಕೂಡ ಭರ್ಜರಿ ಬಹುಮತ ಪಡೆದ ಮಹಾಯುತಿ ಪಡೆಯ ಸರ್ಕಾರ ರಚನೆ ಆಗಿರಲಿಲ್ಲ. ಮುಖ್ಯಮಂತ್ರಿ ವಿಚಾರದಲ್ಲಿ ಶಿಂಧೆ ಹಾಗೂ ಫಡ್ನವಿಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಇಂದು ಫಡ್ನವಿಸ್ ಅವರನ್ನು ಶಿಂಧೆ ಭೇಟಿ ಆಗಿದ್ದರು. ಅದಾದ ನಂತರ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ಫಡ್ನವಿಸ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಡಲಾಗಿದೆ.

 


Spread the love

Leave a Reply

Your email address will not be published. Required fields are marked *