Karnataka Voice

Latest Kannada News

ಹಳೇಹುಬ್ಬಳ್ಳಿ “ಅಭಿಷೇಕ-ಸುವರ್ಣ” ಗುಸುಗುಸು- ಪಿಸುಮಾತನಾಡಿದ “ಪಲ್ಲವಿ” ಆಸ್ಪತ್ರೆ ಪಾಲು…!!!

ಹಾಡುಹಗಲೇ ಮಹಿಳೆಯ ಕೊಲೆಗೆ ಯತ್ನ; ನಾಲ್ಕು ಜನರನ್ನು ಕಂಬಿ ಹಿಂದೆ ತಳ್ಳಿದ ಹಳೇಹುಬ್ಬಳ್ಳಿ ಠಾಣೆ ಪೊಲೀಸರು

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಬ್ಯಾಂಕರ್ಸ್ ಕಾಲೊನಿಯಲ್ಲಿ ಬುಧವಾರ ಮಧ್ಯಾಹ್ನ ಹಾಡು ಹಗಲೇ ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಜನರನ್ನು ಬಂಧನ ಮಾಡಿ ಕಂಬಿ ಹಿಂದೆ ತಳ್ಳಿದ್ದಾರೆ.

ಹೆಗ್ಗೇರಿಯ ಅಭಿಷೇಕ ಎಂಬ ಯುವಕ ಬ್ಯಾಂಕರ್ಸ್ ಕಾಲೋನಿಯಲ್ಲಿನ ಪಲ್ಲವಿ ಹಾಗೂ ಸುವರ್ಣಾ ಎಂಬ ಇಬ್ಬರು ಮಹಿಳೆಯರಿಗೆ ಫೈನಾನ್ಸ್ ಮಾಡಿದ್ದ. ಈ ನಡುವೆ ಸುವರ್ಣಾ ಎಂಬ ಮಹಿಳೆಯ ಜೊತೆ ಅಭಿಷೇಕ್ ಅತಿಯಾದ ಸಲುಗೆ ಸ್ನೇಹ ಬೆಳೆದಿತ್ತು. ಹೀಗಾಗಿ ಇವರಿಬ್ಬರ ವಿಚಾರವನ್ನು ಹಲ್ಲೆಗೊಳಗಾದ ಪಲ್ಲವಿ, ಸುವರ್ಣಾಳ ಮನೆಯವರಿಗೆ ತಿಳಿಸಿದ್ದಳು.

ವೀಡಿಯೋ… ಎಕ್ಸಕ್ಲೂಸಿವ್…

ಹೀಗಾಗಿ ಸುವರ್ಣಾಳ ಮನೆಯಲ್ಲಿ ಸ್ವಲ್ಪ ಕಿರಿ ಕಿರಿ ಉಂಟಾಗಿ ಗಲಾಟೆಯಾಗಿತ್ತು. ಇದೇ ಕಾರಣದಿಂದ ಪಲ್ಲವಿಗೆ ಬುದ್ದಿ ಕಲಿಸಬೇಕು ಎಂದು ಸುವರ್ಣಾ ಹಾಗೂ ಅಭಿಷೇಕ್ ಪ್ಲ್ಯಾನ್ ಮಾಡಿದ್ದರು. ಅಭಿಷೇಕ್ ತನ್ನ ಇಬ್ಬರು ಸ್ನೇಹಿತರಾದ ಅಭಿಷೇಕ ಹಾಗೂ ಪ್ರಜ್ವಲ್ ಎಂಬುವರಿಂದ ಮಚ್ಚನ್ನು ತರಿಸಿದ್ದ ಎಂಬ ಮಾಹಿತಿ ಇದೀಗ ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಲವನ್ನು ಪಡೆದುಕೊಂಡಿದ್ದ ಪಲ್ಲವಿ ಎಂಬ ಮಹಿಳೆ ತಣ್ಣಗೆ ಇರೋದು ಬಿಟ್ಟು, ಅವರಿಬ್ಬರ ವಿಚಾರದ ಬಗ್ಗೆ ಬಾಯ್ಬಿಟ್ಟ ತಪ್ಪಿಗೆ ಆಸ್ಪತ್ರೆ ಪಾಲಾದ್ರೆ, ಈತ್ತ ಸಿಟ್ಟಿನ ಭರದಲ್ಲಿ ಕೊಲೆ ಮಾಡಲು ಯತ್ನಿಸಿದ ಅಭಿಷೇಕ ತನ್ನ ಗೆಳತಿ ಹಾಗೂ ಗೆಳೆಯರ ಜೊತೆ ಜೈಲು ಪಾಲಾಗಿದ್ದಾನೆ.

Leave a Reply

Your email address will not be published. Required fields are marked *