Karnataka Voice

Latest Kannada News

ಧಾರವಾಡ: ಚಡ್ಡಿ ಗ್ಯಾಂಗ್ ಕ್ರೌರ್ಯವೂ… ಪಿಎಸ್‌ಐ ಪ್ರಮೋದ ಫೈರಿಂಗ್… IPS ಶಶಿಕುಮಾರ್ ಸ್ಪಿಕಿಂಗ್…!!!

Spread the love

ನಟೋರಿಯಸ್ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರ ಫೈರಿಂಗ್

ಹುಬ್ಬಳ್ಳಿ: ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಗಂಡ ಹೆಂಡತಿಯ ಕೈಕಾಲು ಕಟ್ಟಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿ ಪರಾರಿಯಾಗಿದ್ದ ನಟೋರಿಯಸ್ ಚಡ್ಡಿ ಗ್ಯಾಂಗ್ ದರೊಡೆಕೋರನ ಮೇಲೆ ವಿದ್ಯಾಗಿರಿ ಠಾಣೆಯ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಕಳೆದ 6 ತಿಂಗಳ ಹಿಂದೆ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಸ್ ಡಿ ಎಂ ಆಸ್ಪತ್ರೆಯ ಹಿಂಭಾಗದ ಅಶೋಕ ಕದಂ ಎಂಬುವರ ಮನೆ ಬಾಗಿಲಿಗೆ ಕಲ್ಲನ್ನು ಒಗೆದು ಬಾಗಿಲು ಮುರಿದು ರಾತ್ರಿ ಸಮಯದಲ್ಲಿ ಮನೆಯಲ್ಲಿದ್ದ ದಂಪತಿಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದರೋಡೆ ಮಾಡಿ ಪರಾರಿಯಾಗಿತ್ತು.

ಚಡ್ಡಿ ಗ್ಯಾಂಗ್ ಸಿಸಿಟಿವಿ…

https://www.facebook.com/share/v/19g3SPWtMA/

ಈ ಪ್ರಕರಣವನ್ನು ಬೆನ್ನತ್ತಿದ್ದ ವಿದ್ಯಾಗಿರಿ ಠಾಣೆಯ ಪೊಲೀಸರು ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಆರೋಪಿಗಳು ಆಂಧ್ರಪ್ರದೇಶದ ಕರ್ನೂಲ್‌ನ ನಟೋರಿಯಸ್ ಚಡ್ಡಿ ಗ್ಯಾಂಗ್ ಅನ್ನೋದು ಗೊತ್ತಾಗಿದೆ. ಈ ಪ್ರಕರಣವನ್ನು ಬೆನ್ನತ್ತಿದ್ದ ವಿದ್ಯಾಗಿರಿ ಠಾಣೆಯ ಪೊಲೀಸರು ಪ್ರಕರಣವನ್ನು ಬೆನ್ನತ್ತಿದ್ದರು. ಈ ಪ್ರಕರಣ ಮಾಸುವ ಮುನ್ನವೇ ಇದೆ ಗ್ಯಾಂಗ್ ನವಲೂರಿನಲ್ಲಿ ಶುಕ್ರವಾರ ರಾತ್ರಿ ಮನೆಯೊಂದನ್ನು ದರೋಡೆ ಮಾಡಲು ಪ್ಲ್ಯಾನ್ ಮಾಡಿದ್ದ ವೇಳೆ ವಿದ್ಯಾಗಿರಿ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧನ ಮಾಡಲು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾದಾಗ ಆತ್ಮರಕ್ಷಣೆಗಾಹಾರಿಸಿದ್ದಾರೆರೆಮೋದ ದರೊಡೆಕೋರ ಪಾಲಾ ವೆಂಕಟೇಶ್ವರ ರಾವ್ ಮೇಲೆ ಗುಂಡು ಹಾರಿಸಿದ್ದಾರೆ.

ಘಟನೆಯಲ್ಲಿ PSI ಪ್ರಮೋದ ಸೇರಿದಂತೆ ಓರ್ವ ಪೊಲೀಸ್ ಕಾನ್ಸ್‌ಟೇಬಲ್‌ಗೆ ಗಾಯವಾಗಿದ್ದು, ಅವರ ಆರೋಗ್ಯವನ್ನು ಕೂಡಾ ಕಮೀಷನರ್ ಎನ್. ಶಶಿಕುಮಾರ್ ವಿಚಾರಣೆ ನಡೆಸಿದ್ದು, ಈ ನಟೋರಿಯಸ್ ದರೋಡೆ ಮಾಡುವ ಚಡ್ಡಿ ಗ್ಯಾಂಗ್ ಕರ್ನಾಟಕದ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ದರೋಡೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು ಪೊಲೀಸರು ತನಿಖೆಯನ್ನು ನಡೆಸಿದ್ದಾರೆ.


Spread the love

Leave a Reply

Your email address will not be published. Required fields are marked *