ಯಮನೂರ ಬಳಿ ಬೈಕ್ ಅಪಘಾತ- ಬಿಜೆಪಿ ಕಾರ್ಯಕರ್ತ ದುರ್ಮರಣ….

ಧಾರವಾಡ: ನವಲಗುಂದ ಪಟ್ಟಣದಿಂದ ತಮ್ಮೂರಿಗೆ ಹೋಗುತ್ತಿದ್ದ ಸಮಯದಲ್ಲಿ ಬೈಕ್ ಅಪಘಾತವಾಗಿ ಸವಾರ ಸಾವಿಗೀಡಾದ ಘಟನೆ ಯಮನೂರ ಗ್ರಾಮದ ಬಳಿ ಸಂಭವಿಸಿದೆ.
ಮೃತ ಯುವಕನನ್ನ ಮಂಜುನಾಥ ರಾಮದುರ್ಗ ಎಂದು ಗುರುತಿಸಲಾಗಿದ್ದು, ಮಂಜುನಾಥ ಭಾರತೀಯ ಜನತಾ ಪಕ್ಷದ ಕಟ್ಟಾ ಕಾರ್ಯಕರ್ತರಾಗಿದ್ದರೆಂದು ಗೊತ್ತಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು, ಸರಕಾರಿ ಆಸ್ಪತ್ರೆಗೆ ತೆರಳಿ, ಅಂತಿಮ ನಮನ ಸಲ್ಲಿಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.
ಅಪಘಾತದ ಕುರಿತು ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.