Posts Slider

Karnataka Voice

Latest Kannada News

ಕಲಘಟಗಿಯ ದೇವಿಕೊಪ್ಪದ ಬಳಿ ಮರಕ್ಕೆ ಡಿಕ್ಕಿ ಹೊಡೆದ ಕ್ರೂಸರ್- ಯಲವಿಗಿ ಗ್ರಾಮದ 7ವರ್ಷದ ಮಗು ಸಾವು, ಹಲವರಿಗೆ ಗಾಯ….

Spread the love

ಧಾರವಾಡ: ಮದುವೆ ಸಮಾರಂಭ ಮುಗಿಸಿಕೊಂಡು ಮರಳುತ್ತಿದ್ದ ಸಮಯದಲ್ಲಿ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕ ಸಾವಿಗೀಡಾಗಿ, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದ ಬಳಿ ಸಂಭವಿಸಿದೆ.

ಕುಂದಗೋಳ ತಾಲೂಕಿನ ಯಲವಿಗಿ ಗ್ರಾಮದಿಂದ ಗಳಗಿನಗಟ್ಟಿ ಗ್ರಾಮಕ್ಕೆ ಬಂದಿದ್ದ ಕ್ರೂಸರ್ ವಾಹನ ಅಪಘಾತಗೀಡಾಗಿದೆ. ಘಟನೆಯಲ್ಲಿ ಸಾತ್ವಿಕ ಮಂಜುನಾಥ ಮುದಿಗೌಡರ ಎಂಬ ಏಳು ವರ್ಷದ ಬಾಲಕ ಸಾವಿಗೀಡಾಗಿದ್ದಾನೆ.

ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಲಾಗಿದೆ. ಪ್ರಕರಣದ ಕುರಿತು ಕಲಘಟಗಿ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

Leave a Reply

Your email address will not be published. Required fields are marked *

You may have missed