Posts Slider

Karnataka Voice

Latest Kannada News

ಹಾಡುಹಗಲೇ “ಕ್ಲಾಸ್ ಒನ್ ಕಂಟ್ರಾಕ್ಟರ್” ಭೀಕರ ಹತ್ಯೆ… ಸುಫಾರಿ ಶಂಕೆ…!!!

Spread the love

ಹತ್ಯೆಯಾಗುವ ಮುನ್ನ ಚಲನವಲನ ಸಿಸಿಟಿವಿಯಲ್ಲಿ ಸೆರೆ

ಪಕ್ಕಾ ಪ್ಲಾನ್ ಮಾಡಿ ಹತ್ಯೆ…!!

ಶಿಗ್ಗಾಂವ: ಹಾಡುಹಗಲೇ ಪ್ರಥಮ ದರ್ಜೆಯ ಗುತ್ತಿದಾರನನ್ನ ಮಾರಕಾಸ್ತ್ರಗಳಿಂದ ಮನಸೋಇಚ್ಚೆ ಹೊಡೆದು ಕೊಲೆಗೈದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಸಂಭವಿಸಿದೆ.

40 ವರ್ಷದ ಶಿವಾನಂದ ಕುನ್ನೂರು ಪ್ರಥಮ ದರ್ಜೆ ಗುತ್ತಿಗೆದಾರ ಹತ್ಯೆಯಾಗಿದ್ದು, ಆಸ್ತಿ ವಿಚಾರಕ್ಕೆ ಕೊಲೆ ಮಾಡಿರುವ ಶಂಕೆಯಿದೆ. ಸುಪಾರಿ ಕೊಟ್ಟು ಕೊಲೆ ಮಾಡಿಸಿರೋ ಶಂಕೆಯನ್ನ ಸಂಬಂಧಿಕರು ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಶಿಗ್ಗಾಂವಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಸುತ್ತಲಿನ ಸಿಸಿಟಿವಿಗಳ ಪರಿಶೀಲನೆ ನಡೆಯುತ್ತಿದೆ.


Spread the love

Leave a Reply

Your email address will not be published. Required fields are marked *

You may have missed