ಹುಬ್ಬಳ್ಳಿಯ ಕೋಳಿವಾಡದ ಬಳಿ ಸಾರಿಗೆ ಬಸ್ ಪಲ್ಟಿ- 30ಕ್ಕೂ ಹೆಚ್ಚು ಜನರಿಗೆ ಗಾಯ…!!!

ಹುಬ್ಬಳ್ಳಿ: ಶಿರಹಟ್ಟಿಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ವಾಯುವ್ಯ ರಸ್ತೆ ಸಾರಿಗೆ ಸೇರಿದ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕೋಳಿವಾಡ ಗ್ರಾಮದ ಬಳಿ ಸಂಭವಿಸಿದೆ.
ಘಟನೆಯಲ್ಲಿ ಮೂವತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ. ಮಾಹಿತಿ ಸಿಗುತ್ತಿದ್ದ ಹಾಗೇ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Exclusive…
ನಿರಂತರವಾಗಿ ಸುರಿಯುತ್ತಿರುವ ಮಳೆಯೂ ಬಸ್ ಪಲ್ಟಿಯಾಗಲು ಕಾರಣವಾಗಿರುವ ಶಂಕೆಯಿದೆ. ಕಿರಿದಾದ ರಸ್ತೆಯ ಬದಿಯಲ್ಲಿ ರಸ್ತೆ ಕುಸಿದಿದೆ ಎಂದು ಹೇಳಲಾಗುತ್ತಿದೆ.