ಧಾರವಾಡ-ಸವದತ್ತಿ ರಸ್ತೆಯಲ್ಲಿ “ಹಿಟ್ ಆ್ಯಂಡ್ ರನ್”- ನರೇಂದ್ರದ ಮಹಿಳೆ ದುರ್ಮರಣ…
ಧಾರವಾಡ: ಸವದತ್ತಿ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ನಿವಾಸಿ ಲಲಿತಾ ಉದಯಕುಮಾರ ಹಕ್ಕರಕಿ ಎಂದು ಗುರುತಿಸಲಾಗಿದೆ. ರಸ್ತೆ ದಾಟುವಾಗ ಅಥವಾ ಸಂಚರಿಸುವಾಗ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಇವರಿಗೆ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಮಹಿಳೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಾರಿಯಾದ ವಾಹನಕ್ಕಾಗಿ ಶೋಧ ನಡೆಸುತ್ತಿದ್ದಾರೆ.
