Posts Slider

Karnataka Voice

Latest Kannada News

Big Breaking: ಭೀಕರ ಅಪಘಾತ- ಮೂವರು RSIಗಳ ದುರ್ಮರಣ.. ಇನ್ನಿಬ್ಬರ ಸ್ಥಿತಿ ಗಂಭೀರ…

Spread the love

ಚಳ್ಳಕೆರೆ: ತಾಲ್ಲೂಕಿನ ಹೆಗ್ಗೆರೆ ಬಳಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಬಳ್ಳಾರಿಗೆ ಕಾರಿನಲ್ಲಿ ತೆರಳುತ್ತಿದ್ದ ಅಧಿಕಾರಿಗಳು, ಬೆಳಿಗ್ಗೆ 7 ಗಂಟೆ ಸುಮಾರಿಗೆ ಹೆಗ್ಗೆರೆಯ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಬಳಿ ತಲುಪಿದಾಗ ಈ ದುರಂತ ಸಂಭವಿಸಿದೆ. ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ, ಮುಂದೆ ಹೋಗುತ್ತಿದ್ದ ಲಾರಿಗೆ ಕಾರು ಹಿಂದಿನಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಲಾರಿಯ ಹಿಂಭಾಗಕ್ಕೆ ಸಿಲುಕಿಕೊಂಡಿದ್ದು, ಮೂವರು ಅಧಿಕಾರಿಗಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇನ್ನಿಬ್ಬರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ತಕ್ಷಣ ಚಳ್ಳಕೆರೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮೃತರು ಮೂವರು ಆರ್‌ಎಸ್‌ಐಗಳಾಗಿದ್ದು, ಕಾರಟಗಿಯ ಮಂಜುನಾಥ ಹಾದಿಮನಿ, ರಾಯಚೂರಿನ‌ ಅಂಬರೀಷ ಹಾಗೂ ತೀರ್ಥಹಳ್ಳಿಯ ಸಚಿನ ಎಂದು ಗುರುತಿಸಲಾಗಿದೆ. ಉಳಿದ ಮೈಸೂರಿನ ಸಿವಿಲ್ ಪಿಎಸ್ಐ ಈಶ್ವರ ಮತ್ತು ಮಹಾಂತೇಶ ಎಂಬ ಆರ್‌ಎಸ್ಐ ಅವರುಗಳ ಸ್ಥಿತಿ ಗಂಭೀರವಾಗಿದೆ.


Spread the love

Leave a Reply

Your email address will not be published. Required fields are marked *