Posts Slider

Karnataka Voice

Latest Kannada News

ನಿಲ್ದಾಣದಲ್ಲಿ ನಿಂತಿದ್ದ ಬಸ್‌ನ್ನೇ ಎಗರಿಸಿದ ವಜಾಗೊಂಡ ಚಾಲಕ- ಸಿಸಿಟಿವಿಯಲ್ಲಿ ಅಸಲಿಯತ್ತು ಬಯಲು…!!!

Spread the love

ಕುಡಿದ ಮತ್ತಿನಲ್ಲಿ ಕೆಕೆಆರ್‌ಟಿಸಿ ಬಸ್ ಕದ್ದ ವಜಾಗೊಂಡ ಚಾಲಕ!

ಯಾದಗಿರಿ: ಜಿಲ್ಲೆಯ ಸೈದಾಪುರ ಪಟ್ಟಣದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಸೇವೆಯಿಂದ ವಜಾಗೊಂಡಿದ್ದ ಚಾಲಕನೋರ್ವ ಕೆಕೆಆರ್‌ಟಿಸಿ ಬಸ್ಸನ್ನೇ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ.

​ಹಲವು ದೂರುಗಳ ಹಿನ್ನೆಲೆಯಲ್ಲಿ ಕೆಲಸದಿಂದ ತೆಗೆದುಹಾಕಲ್ಪಟ್ಟಿದ್ದ ಮಹಿಪಾಲರೆಡ್ಡಿ ಎಂಬಾತನೇ ಈ ಕೃತ್ಯ ಎಸಗಿದವನು. ಕುಡಿದ ಮತ್ತಿನಲ್ಲಿದ್ದ ಈತ ಸೈದಾಪುರ ಬಸ್ ನಿಲ್ದಾಣದಲ್ಲಿದ್ದ ಬಸ್ಸನ್ನು ಕದ್ದೊಯ್ದು ತನ್ನ ಊರಾದ ರಾಚನಳ್ಳಿಯ ದೇವಸ್ಥಾನದ ಮುಂದೆ ನಿಲ್ಲಿಸಿದ್ದಾನೆ. ಬಸ್ ಕಳುವಾದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕೆಕೆಆರ್‌ಟಿಸಿ ಅಧಿಕಾರಿಗಳು ಶಾಕ್ ಆಗಿದ್ದಾರೆ. ಈ ಹಿಂದೆ ಕರ್ತವ್ಯದಲ್ಲಿದ್ದಾಗಲೂ ಹಣ ದುರುಪಯೋಗಪಡಿಸಿಕೊಂಡ ಆರೋಪ ಈತನ ಮೇಲಿದೆ. ಸದ್ಯ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.


Spread the love

Leave a Reply

Your email address will not be published. Required fields are marked *