Posts Slider

Karnataka Voice

Latest Kannada News

ಹೆಬ್ಬಳ್ಳಿ-ವನಹಳ್ಳಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿ: ಯುವಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

Spread the love

ಧಾರವಾಡ: ತಾಲೂಕಿನ ಹೆಬ್ಬಳ್ಳಿ-ವನಹಳ್ಳಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಸಂಭವಿಸಿದೆ.

ಕಿತ್ತೂರು ಸಮೀಪದ ಶಿವನೂರ ಗ್ರಾಮದ ಮುತ್ತು ರೇವತನವರ (19) ಮೃತಪಟ್ಟ ಯುವಕ. ಮೃತ ಯುವಕ ತನ್ನ ತಾಯಿಯ ತವರೂರಾದ ಹೆಬ್ಬಳ್ಳಿಯಲ್ಲಿ ಇರುತ್ತಿದ್ದ. ಘಟನೆಯಲ್ಲಿ ನಿರಂಜನ ಸುಳ್ಳದ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಲದಲ್ಲಿ ಕೆಲಸ ಮುಗಿಸಿ ರೆಂಟೆ ಹೊಡೆದುಕೊಂಡು ಮುಖ್ಯ ರಸ್ತೆಗೆ ಬರುತ್ತಿದ್ದ ವೇಳೆ, ಎದುರಿನಿಂದ ವೇಗವಾಗಿ ಕಾರೊಂದು ಬಂದಿದೆ. ಕಾರಿಗೆ ದಾರಿ ಬಿಟ್ಟುಕೊಡುವ ಪ್ರಯತ್ನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ ಎನ್ನಲಾಗಿದೆ.

​ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.


Spread the love

Leave a Reply

Your email address will not be published. Required fields are marked *