Posts Slider

Karnataka Voice

Latest Kannada News

​”ದಿನದ ಬಡ್ಡಿ ವ್ಯವಹಾರದಲ್ಲಿ ಪೊಲೀಸರೇ ಭಾಗಿ..? ಕೆಡಿಪಿ ಸಭೆಯಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶಾಸಕ ವಿನಯ್ ಕುಲಕರ್ಣಿ”

Spread the love

ಧಾರವಾಡ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಅವರು ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡ ಗ್ರಾಮೀಣ ಭಾಗದಲ್ಲಿ ಅಕ್ರಮ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿದ್ದರೂ ಪೊಲೀಸರು ಮೌನವಾಗಿರುವುದಕ್ಕೆ ಅವರು ಅಧಿಕಾರಿಗಳಿಗೆ ಚಾಟಿ ಬೀಸಿದರು.

​ಸಭೆಯಲ್ಲಿ ಅತ್ಯಂತ ಗಂಭೀರ ಆರೋಪ ಮಾಡಿದ ಶಾಸಕರು, “ಧಾರವಾಡ ಗ್ರಾಮೀಣ ಭಾಗದಲ್ಲಿ ಇಸ್ಪೀಟ್ ಜೂಜಾಟ, ಗಾಂಜಾ ಮಾರಾಟ ಹಾಗೂ ಐಪಿಎಲ್ ಬೆಟ್ಟಿಂಗ್‌ಗೆ ಪೊಲೀಸರೇ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ. ಕೆಲವು ಪೊಲೀಸ್ ಸಿಬ್ಬಂದಿಯೇ ಅಕ್ರಮ ಚಟುವಟಿಕೆಗಳಿಗೆ ಹಣಕಾಸಿನ ನೆರವು (ಫಂಡಿಂಗ್) ನೀಡುತ್ತಿದ್ದಾರೆ ಹಾಗೂ ದಿನದ ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದಾರೆ” ಎಂದು ಕಿಡಿಕಾರಿದರು.

​ಸದ್ಯ ಐಪಿಎಲ್ ಕ್ರಿಕೆಟ್ ಹಬ್ಬ ಆರಂಭವಾಗಿದ್ದು, ಗ್ರಾಮೀಣ ಭಾಗದ ಯುವಕರು ಬೆಟ್ಟಿಂಗ್ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಪೊಲೀಸರು ತಕ್ಷಣ ಎಚ್ಚೆತ್ತುಕೊಂಡು ಬೆಟ್ಟಿಂಗ್ ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿನಯ್ ಕುಲಕರ್ಣಿ ಸೂಚಿಸಿದರು.


Spread the love

Leave a Reply

Your email address will not be published. Required fields are marked *

You may have missed