ಪ್ರೀತಿಗಾಗಿ ಬಸ್ಗೆ ಡಿಕ್ಕಿ ಹೊಡೆದು ಸುಟ್ಟು ಹೋದ “ಹುಚ್ಚು ಹುಡುಗ”- Exclusive Video
ಪ್ರೀತಿಗಾಗಿ ಪ್ರಾಣಾರ್ಪಣೆ: ಬಸ್ ಹಾಗೂ
ಬೈಕ್ ಮುಖಾಮುಖಿ ಡಿಕ್ಕಿ,
ಯುವಕ ಸಜೀವ ದಹನ
ವಿಜಯಪುರ: ಪ್ರೀತಿಯ ಬಲೆಯಲ್ಲಿ ಸಿಲುಕಿ ಜೀವನದ ಬಗ್ಗೆ ಜಿಗುಪ್ಸೆಗೊಂಡ ಯುವಕನೊಬ್ಬ ವೇಗವಾಗಿ ಹೋಗಿ ಬಸ್ಗೆ ಬೈಕ್ ಡಿಕ್ಕಿ ಹೊಡೆಸಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಟೋಲ್ಗೇಟ್ ಬಳಿ ನಡೆದಿದೆ. ದೇವರಹಿಪ್ಪರಗಿಯ ಮುಳಸಾವಳಗಿ ಗ್ರಾಮದ ನಿವಾಸಿ ಅಭಿಷೇಕ್ ನಾಗರಾಳ (22) ಮೃತ ದುರ್ದೈವಿ.
ಮೃತ ಅಭಿಷೇಕ್ ತಾನು ಪ್ರೀತಿಸುತ್ತಿದ್ದ ಯುವತಿಯನ್ನು ತನ್ನಿಂದ ದೂರ ಮಾಡಿದವರ ವಿರುದ್ಧ ತೀವ್ರ ಅಸಮಾಧಾನ ಹೊಂದಿದ್ದ ಎನ್ನಲಾಗಿದೆ. ಸಾಯುವ ಮುನ್ನ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದ ಈತ, “ನನ್ನ ಪ್ರೀತಿಯನ್ನು ದೂರ ಮಾಡಿದವರೇ ನನ್ನ ಸಾವಿಗೆ ಕಾರಣ” ಎಂದು ಆರೋಪಿಸಿ, ಮಧ್ಯಾಹ್ನದ ಹೊತ್ತಿಗೆ ತಾನು ಸಾಯುವುದಾಗಿ ಘೋಷಿಸಿದ್ದ.
ಅದರಂತೆಯೇ ತನ್ನ ಎನ್ಫೀಲ್ಡ್ ಬೈಕ್ ಮೂಲಕ ಕೆಎಸ್ಆರ್ಟಿಸಿ ಬಸ್ಗೆ ಮುಖಾಮುಖಿ ಡಿಕ್ಕಿ ಹೊಡೆಸಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಹಾಗೂ ಬಸ್ ಎರಡಕ್ಕೂ ಬೆಂಕಿ ಹೊತ್ತಿಕೊಂಡಿದ್ದು, ಅಭಿಷೇಕ್ ಸ್ಥಳದಲ್ಲೇ ಸಜೀವ ದಹನವಾಗಿದ್ದಾನೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
