ಕುಂದಗೋಳ ಪಂಚಗ್ರಹ ಹಿರೇಮಠದ ಆಸ್ತಿ ಮಾರಾಟ: ಸ್ವಾಮೀಜಿಗಳ ವಿರುದ್ಧ ಹೋರಾಟಕ್ಕೀಳಿದ ಹಲವರು…!
ಕುಂದಗೋಳ ಪಂಚಗ್ರಹ ಹಿರೇಮಠದ ಆಸ್ತಿ ಮಾರಾಟ ವಿರೋಧ: ಜಿಲ್ಲಾಧಿಕಾರಿಗೆ ಭಕ್ತರ ದೂರು
ಧಾರವಾಡ: ಕುಂದಗೋಳದ ಐತಿಹಾಸಿಕ ಪಂಚಗ್ರಹ ಹಿರೇಮಠದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ, ನೂರಾರು ಭಕ್ತರು ಬುಧವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮಠಕ್ಕೆ ಸೇರಿದ 53 ಎಕರೆ ಭೂಮಿಯನ್ನು ಅಕ್ರಮವಾಗಿ ಕೃಷಿಯೇತರ (NA) ಭೂಮಿಯನ್ನಾಗಿ ಪರಿವರ್ತಿಸಿ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಮಾರಾಟ ಮಾಡಲು ಮುಂದಾಗಿರುವುದನ್ನು ಭಕ್ತರು ತೀವ್ರವಾಗಿ ಖಂಡಿಸಿದರು. ದಶಕಗಳಿಂದ ಮಠದ ಆಸ್ತಿ ಮತ್ತು ಅಮೂಲ್ಯ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಕ್ರಮವನ್ನು ಕೂಡಲೇ ನಿಲ್ಲಿಸಬೇಕು. ಏಪ್ರಿಲ್ 10ರಂದು ಈ ಸಂಬಂಧ ಹೊರಡಿಸಲಾದ ಆದೇಶವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.
ಮುಂದಿನ ಎಂಟು ದಿನಗಳ ಒಳಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಭಕ್ತರು ಎಚ್ಚರಿಸಿದ್ದಾರೆ.
