ಮನೆ ಗಣತಿ ಮುಗಿಸಿ ಮನೆಗೆ ಹೋಗುತ್ತಿದ್ದ ಮುಖ್ಯ ಶಿಕ್ಷಕರ ಬೈಕಿಗೆ ಕಾರು ಡಿಕ್ಕಿ- ದುರ್ಮರಣ…
ಕೋಲಾರ: ಮನೆ ಗಣತಿ ಕಾರ್ಯ ಮುಗಿಸಿ ಬೈಕ್ನಲ್ಲಿ ವಾಪಸಾಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 75ರ ಬೆತ್ತನಿ ಗ್ರಾಮದ ಬಳಿ ಕಾರು ಮತ್ತು ಬೈಕ್ ಡಿಕ್ಕಿಯಾಗಿ, ಭೈರಂಡಹಳ್ಳಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಮುನಿರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ನಲ್ಲಿದ್ದ ಮತ್ತೊಬ್ಬ ಶಿಕ್ಷಕ ಕೆ.ಟಿ. ನಾಗರಾಜ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
