Karnataka Voice

Latest Kannada News

ಶಾಸಕ ವಿನಯ ಕುಲಕರ್ಣಿಯವರ ಬಗ್ಗೆ “ಹೊಸ ಭರವಸೆ”- ಸಂಪೂರ್ಣ ವೀಡಿಯೋ ಇಲ್ಲಿದೆ ನೋಡಿ…!!!

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಅವರ ವಿರುದ್ಧ ವ್ಯವಸ್ಥಿತ ರಾಜಕೀಯ ಷಡ್ಯಂತ್ರ ನಡೆದಿದ್ದು, ಅವರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿ ಧಾರವಾಡ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಅಭಿಮಾನಿಗಳು ಶುಕ್ರವಾರ ನಗರದಲ್ಲಿ ಮೌನ ಪ್ರತಿಭಟನೆ ನಡೆಸಿದರು.

​ನಗರದ ಕಲಾಭವನದಿಂದ ಆರಂಭವಾದ ಈ ಮೌನ ಮೆರವಣಿಗೆಯು ಕೆ.ಸಿ.ಸಿ ಬ್ಯಾಂಕ್ ವರೆಗೆ ಸಾಗಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನಾಯಕರು, “ವಿನಯ ಕುಲಕರ್ಣಿ ಅವರ ರಾಜಕೀಯ ಏಳಿಗೆಯನ್ನು ಸಹಿಸದ ಬಿಜೆಪಿಗರು, ಅವರನ್ನು ಕೊಲೆ ಪ್ರಕರಣದಲ್ಲಿ ಸಿಲುಕಿಸುವ ಮೂಲಕ ಜೈಲಿಗೆ ಕಳುಹಿಸಿದ್ದಾರೆ. ನಮಗೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆಯಿದ್ದು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಅವರಿಗೆ ನ್ಯಾಯ ಸಿಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

​”ನಮ್ಮ ನಾಯಕ ನಮ್ಮ ಹೆಮ್ಮೆ” ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಂ.ಎಸ್. ಅಕ್ಕಿ, ಎಂಎಲ್‌ಸಿ ಜಕ್ಕಪ್ಪನವರ, ಮುಖಂಡರಾದ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ, ಅಲ್ತಾಪ ಹಳ್ಳೂರ, ಅರವಿಂದ ಏಗನಗೌಡರ, ಮನೋಜ ಕರ್ಜಗಿ, ಬಂಗಾರೇಶ ಹಿರೇಮಠ, ಮೋಹನ ಲಿಂಬಿಕಾಯಿ,  ಚಂದ್ರಶೇಖರ ಜುಟ್ಟಲ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮಾ ಬಳೋಗಿ, ಬಸವರಾಜ ಜಾಧವ ಸೇರಿದಂತೆ ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೂರಾರು ಅಭಿಮಾನಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *