Karnataka Voice

Latest Kannada News

ಹುಬ್ಬಳ್ಳಿಯ ಗುಜರಾತ ಭವನ ಬಳಿ “ಮಣ್ಣಿನಡಿ ಸಿಲುಕಿ” ಹಳ್ಳಿಕೇರಿಯ ಕಾರ್ಮಿಕ ಉಸಿರುಗಟ್ಟಿ‌ ಸಾವು…!

Spread the love

ಹುಬ್ಬಳ್ಳಿ: ಇಲ್ಲಿನ ಗುಜರಾತ್ ಭವನದ ಬಳಿ ರಾಜಕಾಲುವೆ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು ಬಿದ್ದು ಕೂಲಿ ಕಾರ್ಮಿಕರೊಬ್ಬರು ದುರ್ಮರಣ ಹೊಂದಿದ ಘಟನೆ ನಡೆದಿದೆ.

​ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದ ನಿವಾಸಿ ಮಲ್ಲಪ್ಪ ಜೋಗಿನ್ (41) ಮೃತಪಟ್ಟ ದುರ್ದೈವಿಯಾಗಿದ್ದಾನೆ.

​ಗುಜರಾತ್ ಭವನದ ಬಳಿ ರಾಜಕಾಲುವೆಗೆ ಸಂಪರ್ಕ ಕಲ್ಪಿಸಲು ಒಳಚರಂಡಿ ನಿರ್ಮಾಣ ಕಾಮಗಾರಿ ಹಮ್ಮಿಕೊಳ್ಳಲಾಗಿತ್ತು. ಇತ್ತೀಚೆಗೆ ಸುರಿದ ಮಳೆಯಿಂದಾಗಿ ಇಲ್ಲಿನ ಮಣ್ಣು ಸಂಪೂರ್ಣವಾಗಿ ನೆನೆದುಕೊಂಡಿತ್ತು. ಈ ವಿಷಯ ತಿಳಿಯದ ಕಾರ್ಮಿಕ ಮಲ್ಲಪ್ಪ, ಒಳಚರಂಡಿ ನಿರ್ಮಾಣಕ್ಕಾಗಿ ಗುಂಡಿಗಿಳಿದು ಮಣ್ಣು ತೆಗೆಯಲು ಮುಂದಾಗಿದ್ದಾರೆ. ಈ ವೇಳೆ ಮೇಲ್ಭಾಗದ ಮಣ್ಣು ಏಕಾಏಕಿ ಅವರ ಮೇಲೆ ಕುಸಿದು ಬಿದ್ದಿದೆ. ಪರಿಣಾಮವಾಗಿ ಮಲ್ಲಪ್ಪ ಅವರು ಸ್ಥಳದಲ್ಲೇ ಉಸಿರುಗಟ್ಟಿ ಕೊನೆಯುಸಿರೆಳೆದಿದ್ದಾರೆ.

​ಈ ಕಾಮಗಾರಿಯನ್ನು ಮಂಜುನಾಥ ಬೊಮ್ಮಶೆಟ್ಟಿ ಎಂಬ ಗುತ್ತಿಗೆದಾರರು ನಡೆಸುತ್ತಿದ್ದರು ಎನ್ನಲಾಗಿದೆ. ಮಳೆಯಿಂದ ಮಣ್ಣು ಸಡಿಲಗೊಂಡಿದ್ದರೂ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದೆ, ಸುರಕ್ಷತಾ ಸಾಧನಗಳನ್ನು ನೀಡದೆ ನಿರ್ಲಕ್ಷ್ಯದಿಂದ ಕಾಮಗಾರಿ ನಡೆಸುತ್ತಿರುವುದೇ ಈ ದುರ್ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

​ಈ ಕುರಿತು ಹುಬ್ಬಳ್ಳಿಯ ಉಪ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed