“94”ಬ್ಯಾಚಿನ ಹುಬ್ಬಳ್ಳಿ ಕೇಶ್ವಾಪುರ ಠಾಣೆಯ ASI ರಮೇಶ ನಾಯಕ ಅಕಾಲಿಕ ನಿಧನ…
ಹುಬ್ಬಳ್ಳಿ: ಇಲ್ಲಿನ ಕೇಶ್ವಾಪುರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ (ASI) ರಮೇಶ್ ನಾಯಕ್ (1994ರ ಬ್ಯಾಚ್) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೂಲತಃ ಕಾರವಾರ ಜಿಲ್ಲೆಯವರಾದ ರಮೇಶ್ ನಾಯಕ್ ಅವರು ಸದ್ಯ ಹುಬ್ಬಳ್ಳಿಯ ಪಂಪಾನಗರದಲ್ಲಿ ವಾಸಿಸುತ್ತಿದ್ದರು. ಇತ್ತೀಚೆಗೆ ಕಡಿಮೆ ರಕ್ತದೊತ್ತಡ (Low BP) ಸಮಸ್ಯೆಯಿಂದ ತೀವ್ರವಾಗಿ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

1994ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಇವರು, ಚನ್ನಪಟ್ಟಣದ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದಿದ್ದರು. ತರಬೇತಿಯ ದಿನಗಳಲ್ಲಿ ಇವರು 5ನೇ ಪ್ಲಟೂನ್ನಲ್ಲಿದ್ದರು ಎಂದು ಅವರ ಒಡನಾಡಿಗಳು ನೆನಪಿಸಿಕೊಂಡಿದ್ದಾರೆ. ಕರ್ತವ್ಯದ ಮೇಲಿನ ನಿಷ್ಠೆ ಹಾಗೂ ಸೌಮ್ಯ ಸ್ವಭಾವದಿಂದ ಇಲಾಖೆಯಲ್ಲಿ ಗುರುತಿಸಿಕೊಂಡಿದ್ದರು.
ಸಂತಾಪ: ದಕ್ಷ ಅಧಿಕಾರಿಯಾಗಿದ್ದ ರಮೇಶ್ ನಾಯಕ್ ಅವರ ಅಕಾಲಿಕ ಮರಣಕ್ಕೆ ಇಲಾಖೆಯ ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಲಾಗಿದೆ.
