Karnataka Voice

Latest Kannada News

ಅಣ್ಣಿಗೇರಿಯಲ್ಲಿ “ಗ್ಯಾಸ್ ಗೀಸರ್ ಸಿಲೆಂಡರ್” ಸ್ಪೋಟ- ತಾಯಿ, ಮಕ್ಕಳಿಬ್ಬರ ಸ್ಥಿತಿ ಗಂಭೀರ…

Spread the love

ಧಾರವಾಡ: ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಉದಯ ನಗರದಲ್ಲಿ ಗ್ಯಾಸ್ ಗೀಸರ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

​ಇಲ್ಲಿನ ನಿವಾಸಿ ಮೊಹಮ್ಮದ್ ಅಲಿ ಧಾರವಾಡ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಸಂಪೂರ್ಣ ಕುಸಿದು ಬಿದ್ದಿದ್ದು, ಅವಶೇಷಗಳು ಅಕ್ಕಪಕ್ಕದ ಮನೆಗಳ ಮೇಲೆ ಬಿದ್ದಿವೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ತಾಯಿ ಹಾಗೂ ಇಬ್ಬರು ಮಕ್ಕಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

Leave a Reply

Your email address will not be published. Required fields are marked *