Karnataka Voice

Latest Kannada News

ನವಲಗುಂದ-ನರಗುಂದ ರಸ್ತೆಯಲ್ಲಿ “ವಿಜಯಪುರ-ಹುಬ್ಬಳ್ಳಿ” NWKRTC ಬಸ್ ಪಲ್ಟಿ- Exclusive Video… ಈಗಷ್ಟೇ ನಡೆದಿರೋ ಘಟನೆ

Spread the love

ನವಲಗುಂದ: ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ನವಲಗುಂದ–ನರಗುಂದ ರಸ್ತೆಯ ಅಮರಗೋಳ ಕ್ರಾಸ್ ಸಮೀಪ ಪಲ್ಟಿಯಾಗಿ, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಘಟನೆ ಕೆಲವೇ ಕ್ಷಣಗಳ ಹಿಂದೆ ನಡೆದಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ಬಸ್‌ನ ಟೈರ್ ಸಿಡಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ. ಆದರೆ, ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.

ಅಪಘಾತದ ಬಳಿಕ ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯ ಯುವಕರು ಹಾಗೂ ದಾರಿಹೋಕರು ರಕ್ಷಿಸಿ ಹೊರತೆಗೆದು ಮಾನವೀಯತೆ ಮೆರೆದಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸುವ ಕಾರ್ಯ ನಡೆಯುತ್ತಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಸಂಬಂಧಿತ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಬೇಕಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

Leave a Reply

Your email address will not be published. Required fields are marked *

You may have missed