“ಕಾನ್ಸಟೇಬಲ್ ಪರೀಕ್ಷೆ” ಕೆಲ ಪರೀಕ್ಷಾರ್ಥಿಗಳು ಸೆಂಟರ್ನೊಳಗೆ ಹೋಗಿ ಬಂದ್ರು. ಗೇಟ್ ಮುರಿದ್ರು: ಹಲವರಿಗೆ ಲಾಠಿ ರುಚಿ- ಜಿಲ್ಲಾಧಿಕಾರಿಗಳಿಂದ “ಸತ್ಯ ರಿವೀಲ್”…
ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಗೊಂದಲ; ಪ್ರತಿಭಟನೆ, ಲಾಠಿ ಪ್ರಹಾರ
ವಿಜಯಪುರ: ತಿಕೋಟಾದ ಶಾರದಾಂಬಾ ಪಿಯು ಕಾಲೇಜಿನ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷಾ ಕೇಂದ್ರದಲ್ಲಿ ಓಎಂಆರ್ ಶೀಟ್ ಮತ್ತು ಪ್ರಶ್ನೆ ಪತ್ರಿಕೆ ಗೊಂದಲದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಪ್ರಶ್ನೆ ಪತ್ರಿಕೆ ತಡವಾಗಿ ವಿತರಣೆ, ಅಕ್ರಮ ನಡೆದಿದೆ ಎಂದು ಆರೋಪಿಸಿದ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಎದುರು ಧರಣಿ ನಡೆಸಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಲವರು ಮುಖ್ಯ ಗೇಟ್ ಮುರಿದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತು.
ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಹಾಗೂ ಎಸ್ಪಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಲು ಯತ್ನಿಸಿದರು. ಆದರೆ ಪ್ರತಿಭಟನೆ ತೀವ್ರಗೊಂಡ ಕಾರಣ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು. ಘಟನೆ ಕುರಿತು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.
