Karnataka Voice

Latest Kannada News

“ಶಾಸಕ ಪ್ರಸಾದ ಅಬ್ಬಯ್ಯರಿಗೆ” ಸಿಗದ ಮಂತ್ರಿಗಿರಿ: ಪ್ರಾಮಾಣಿಕ ಕಾರ್ಯಕರ್ತರಿಂದ ಟೈರ್‌ಗೆ ಬೆಂಕಿಯಿಟ್ಟು ಆಕ್ರೋಶ..

Spread the love

ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆ, ಅವರ ಬೆಂಬಲಿಗರು ಸೋಮವಾರ ಹಳೆ ಹುಬ್ಬಳ್ಳಿಯ ಇಂಡಿಪಂಪ್ ಸರ್ಕಲ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಮುಖ್ಯಮಂತ್ರಿ ಹಾಗೂ ಪಕ್ಷದ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ಸಚಿವರ ಪಟ್ಟಿಯನ್ನು ತಕ್ಷಣವೇ ಪರಿಷ್ಕರಿಸಿ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದರು.
ಈ ವೇಳೆ ಬೆಂಬಲಿಗರು ಅಬ್ಬಯ್ಯ ಅವರ ಪರ ಘೋಷಣೆಗಳನ್ನು ಕೂಗಿ, ರಸ್ತೆ ಮಧ್ಯೆ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.


Spread the love

Leave a Reply

Your email address will not be published. Required fields are marked *

You may have missed