Karnataka Voice

Latest Kannada News

ಹುಬ್ಬಳ್ಳಿ: ರಸ್ತೆ ಗುಂಡಿಗಳಿಗೆ ಪೂಜೆ ಮಾಡಿ “ಜನಪ್ರತಿನಿಧಿಗಳೇ ಕಳ್ಳರು” ಎಂದ KRS Party…

Spread the love

ಹುಬ್ಬಳ್ಳಿ: ನಗರದ ವಿವಿಧ ರಸ್ತೆಗಳು ಗುಂಡಿಗಳಿಂದ ಹದಗೆಟ್ಟಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ನಿತ್ಯ ಪರದಾಡುವಂತಾಗಿದೆ. ರಸ್ತೆ ಗುಂಡಿಗಳ ಸಮಸ್ಯೆ ಕುರಿತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ಅಧಿಕಾರಿಗಳ ಗಮನ ಸೆಳೆಯಲು KRS Party ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು.

ರಸ್ತೆ ಮಧ್ಯದಲ್ಲಿರುವ ಗುಂಡಿಗೆ ಹೂವು, ಪೂಜಾ ಸಾಮಗ್ರಿಗಳನ್ನು ಇಟ್ಟು ವಿಶೇಷ ಪೂಜೆ ಸಲ್ಲಿಸಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
‘ರಸ್ತೆ ಗುಂಡಿಗಳಿಗೆ ಪೂಜೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ವ್ಯಂಗ್ಯವಾಗಿ ಪ್ರತಿಭಟಿಸಿದ ಕಾರ್ಯಕರ್ತರು, ಕೂಡಲೇ ರಸ್ತೆ ದುರಸ್ತಿ ಮಾಡದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದರು.


Spread the love

Leave a Reply

Your email address will not be published. Required fields are marked *

You may have missed