ಪತಿಯ ಜೊತೆ ಜಗಳ- ಒಂದೇ ಕುಟುಂಬದ 4ಮಹಿಳೆಯರು, 2ಮಕ್ಕಳ ಶವ ಕೆರೆಯಲ್ಲಿ ಪತ್ತೆ…!!!
ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ 6 ಮಂದಿ ಶವ ಪತ್ತೆ
ವಿಜಯಪುರ: ನಗರದ ಹೊರವಲಯದಲ್ಲಿರುವ ಐತಿಹಾಸಿಕ ಭೂತನಾಳ ಕೆರೆಯಲ್ಲಿ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಬಾಲಕರ ಸೇರಿದಂತೆ ಆರು ಮಂದಿಯ ಶವಗಳು ಪತ್ತೆಯಾಗಿರುವ ಘಟನೆ ಆತಂಕ ಮೂಡಿಸಿದೆ.
ಆಗಸ್ಟ್ 24ರಂದು ನಾಪತ್ತೆಯಾಗಿದ್ದ ತೊರವಿ ಗ್ರಾಮದ ನಿವಾಸಿಗಳಾದ ಶೋಭಾ ಜಾಲಗೇರಿ, ವಿದ್ಯಾ, ಸುವರ್ಣ, ಗೌಡೇಶ್, ವಿಕಾಸ ಹಾಗೂ ಸಾನಿಕಾ ಅವರ ಶವಗಳು ಕೆರೆಯಲ್ಲಿ ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಘಟನೆಗೂ ಮುನ್ನ ಶೋಭಾ ಜಾಲಗೇರಿ ಅವರು ಪತಿ ಮಲಕಾರಿ ಭೀಮರಾಯ ಜಾಲಗೇರಿ ಅವರೊಂದಿಗೆ ಕೌಟುಂಬಿಕ ವಿಚಾರವಾಗಿ ಜಗಳ ಮಾಡಿಕೊಂಡಿದ್ದರು ಎನ್ನಲಾಗಿದೆ. ಬಳಿಕ ಮನೆಯಿಂದ ಹೊರಬಂದಿದ್ದ ಅವರು, ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ನಾಪತ್ತೆಯಾಗಿದ್ದವರಿಗಾಗಿ ಕುಟುಂಬಸ್ಥರು ಹಾಗೂ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಈ ನಡುವೆ ಭೂತನಾಳ ಕೆರೆಯ ಅಂಚಿನಲ್ಲಿ ಶವಗಳು ತೇಲಿ ಬಂದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಶವಗಳನ್ನು ಹೊರತೆಗೆದಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆದರ್ಶ ನಗರ ಠಾಣೆ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.
ಆರು ಮಂದಿ ಒಂದೇ ಘಟನೆಯಲ್ಲಿ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಕೌಟುಂಬಿಕ ಕಲಹವೇ ಘಟನೆಗೆ ಕಾರಣವೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಪೊಲೀಸ್ ತನಿಖೆ ಪೂರ್ಣಗೊಂಡ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಪತ್ತೆ
