Posts Slider

Karnataka Voice

Latest Kannada News

ಇಟಿಗಟ್ಟಿ ಅಪಘಾತ: ತೀವ್ರವಾಗಿ ಗಾಯಗೊಂಡಿದ್ದ ಮಾಜಿ ಶಾಸಕರ ಸೊಸೆ ಸಾವು..!

1 min read
Spread the love

ಧಾರವಾಡ: ತಾಲೂಕಿನ ಇಟಿಗಟ್ಟಿ ಗ್ರಾಮದ ಹುಬ್ಬಳ್ಳಿ-ಧಾರವಾಡ ಬೈಪಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾಜಿ ಶಾಸಕರ ಸೊಸೆ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಜನೇವರಿ 15ರಂದು ಬೆಳ್ಳಂಬೆಳಿಗ್ಗೆ ಟೆಂಪೋ ಹಾಗೂ ಟಿಪ್ಪರ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 11 ಜನರು ಪ್ರಾಣವನ್ನ ಕಳೆದುಕೊಂಡಿದ್ದರು. ಅದೇ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವೇದ ಮಂಜುನಾಥ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ವೇದ ಮಂಜುನಾಥ ಅವರು ಮಾಜಿ ಶಾಸಕ ಎಚ್.ಚಂದ್ರಶೇಖರ ಅವರ ಪುತ್ರ ಎಚ್.ಎಂ. ಮಂಜುನಾಥ ಅವರ ಧರ್ಮಪತ್ನಿಯಾಗಿದ್ದಾರೆ. ವೇದ ಅವರ ಸಾವಿನಿಂದ ಘಟನೆಯಲ್ಲಿ ಮೃತರಾದವರ ಸಂಖ್ಯೆ 12ಕ್ಕೇರಿದೆ.

ವೇದ ಮಂಜುನಾಥ ಅವರ 8 ಗೆಳತಿಯರು ಕೂಡಾ ಘಟನೆಯಲ್ಲಿ ಸಾವಿಗೀಡಾಗಿದ್ದರು. ಮೊದಲು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ತದನಂತರ ಬೇರೆ ಖಾಸಗಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿತ್ತು. ಆದರೆ, 9 ದಿನಗಳ ನಂತರ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed