ಜನೇವರಿ 8ರ ವರೆಗೆ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಣೆ
1 min readಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರ ಬಿಜೆಪಿ ಸದಸ್ಯೆ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಯವರ ನ್ಯಾಯಾಂಗ ಬಂಧನವನ್ನ ಮತ್ತೆ ವಿಸ್ತರಣೆ ಮಾಡಲಾಗಿದೆ.
ನವೆಂಬರ್ 5ರಂದು ಸಿಬಿಐನಿಂದ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿ ಈಗಾಗಲೇ ವಜಾಗೊಂಡಿದ್ದು, ಅವರಾಗಲೇ ಹೈಕೋರ್ಟಿಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಈ ನಡುವೆ ಇಂದು ಅವರ ನ್ಯಾಯಾಂಗ ಬಂಧನದ ಅವಧಿ ಮುಗಿದ ಬೆನ್ನಲ್ಲೇ ಇಂದು ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಯನ್ನ ನಡೆಸಿ, ನ್ಯಾಯಾಂಗ ಬಂಧನವನ್ನ ಜನೇವರಿ 8ರ ವರೆಗೆ ವಿಸ್ತರಣೆ ಮಾಡಿದ್ರು.
ವಿನಯ ಕುಲಕರ್ಣಿಯವರ ಮಾವ ಚಂದ್ರಶೇಖರ ಇಂಡಿ ಕೂಡಾ ನ್ಯಾಯಾಂಗ ಬಂಧನದಲ್ಲಿದ್ದಾರೆ. ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ವಿನಯ ಕುಲಕರ್ಣಿ ಹಾಗೂ ಧಾರವಾಡ ಜೈಲಿನಲ್ಲಿ ಚಂದ್ರಶೇಖರ ಇಂಡಿ ಇರುವುದನ್ನ ಇಲ್ಲಿ ಸ್ಮರಿಸಬಹುದು.