Karnataka Voice

Latest Kannada News

ಚೆನ್ನಾಪುರ ಬಳಿ ಕೊಲೆ ಪ್ರಕರಣ: ಲವ್ ಒನ್ಸ್ ಅಗೇನ್ ಸ್ಟೋರಿ- ಆರೋಪಿ ಬಲೆಗೆ

ಹುಬ್ಬಳ್ಳಿ: ತಾಲೂಕಿನ ಅಂಚಟಗೇರಿಯ ಬಳಿಯ ಚೆನ್ನಾಪುರ ರಸ್ತೆಯಲ್ಲಿ ಹಾದಿ ಹೆಣವಾಗಿದ್ದ ಪ್ರಕರಣವನ್ನ 12 ಗಂಟೆಗಳಲ್ಲಿ ಪತ್ತೆ ಹಚ್ಚುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಕೊಲೆಯಾದವನ ಹೆಂಡತಿಯ ಪ್ರಿಯಕರನೇ ಆರೋಪಿ ಎಂಬುದನ್ನ ಪತ್ತೆ ಹಚ್ಚಲಾಗಿದೆ.


ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಜಗದೀಶ ಕೊಲ್ಲಾಪುರ ಎಂಬ ವ್ಯಕ್ತಿಯ ಶವ ಮಾವನ ಊರಾದ ಅಂಚಟಗೇರಿ ಬಳಿಯ ಚೆನ್ನಾಪುರ ರಸ್ತೆಯಲ್ಲಿ ಸಿಕ್ಕಿತ್ತು. ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದರ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರು, ಅದರಗುಂಚಿ ಗ್ರಾಮದ ಕಾಶಪ್ಪ ನಿಂಗಪ್ಪ ತಿಪ್ಪಣ್ಣನವರ ಎಂಬಾತನನ್ನ ಬಂಧಿಸಿ ಪ್ರಕರಣವನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.


ಕೊಲೆಯಾದ ಜಗದೀಶನ ಹೆಂಡತಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಕಾಶಪ್ಪ, ಜಗದೀಶ ಗ್ರಾಮಕ್ಕೆ ಬಂದಾಗ ಕರೆದುಕೊಂಡು ಹೋಗಿ ಊರ ಹೊರಗೆ ಮದ್ಯ ಕುಡಿಸಿ, ನಸೆಯಾದ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸ ಇನ್ಸಪೆಕ್ಟರ್ ರಮೇಶ ಗೋಕಾಕ ನೇತೃತ್ವದಲ್ಲಿ ಆರೋಪಿಯನ್ನ 12ಗಂಟೆಯಲ್ಲೇ ಬಂಧನ ಮಾಡುವಲ್ಲಿ ಪಿಎಸೈ ಮಂಜುಳಾ ಮತ್ತು ಚಾಮುಂಡೇಶ್ವರಿ, ಸಿಬ್ಬಂದಿಗಳಾದ ನಾರಾಯಣ ಹಿರೇಹೊಳಿ, ಮಂಜು ಹೆಳವರ, ಮಂಜು ಅಮ್ಮಿನಬಾಯಿ, ಅರ್ಜುನ ಟಕಾಯಿ, ಮಂಜು ವಾಲಿಕಾರ, ಚಂದ್ರು ಜನಗಣ್ಣನವರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *