ಎಂಎಲ್ಸಿ ಚುನಾವಣೆ: ಅನಿಲಕುಮಾರ ಪಾಟೀಲರಲ್ಲಷ್ಟೇ ಉತ್ಸಾಹ
1 min readಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ನಡೆಯುತ್ತಿದ್ದರೂ ಕಾಂಗ್ರೆಸ್ ಪಾಳಯದಲ್ಲಿ ಅಷ್ಟೇನು ಉತ್ಸಾಹ ಕಾಣುತ್ತಿಲ್ಲ. ಧಾರವಾಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲಕುಮಾರ ಪಾಟೀಲ ಮಾತ್ರ ಸುಮ್ಮನೆ ಕುಳಿತಿಲ್ಲ.
ಹಾಗಾಗಿಯೇ ಚೂರು ಚುನಾವಣೆಯ ಮೂಡ್ ಕಾಂಗ್ರೆಸನಲ್ಲಿ ಕಂಡು ಬರುತ್ತಿದೆ. ಇಂದು ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಬರುವ ಬ್ಲಾಕ್ ಅಧ್ಯಕ್ಷರುಗಳ ಸಭೆಯನ್ನು ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ನಡೆಸಲಾಯಿತು.
ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಆರ್.ಎಂ.ಕುಬೇರಪ್ಪ ಚುನಾವಣೆಯ ಬಗ್ಗೆ ಮಾಹಿತಿ ನೀಡಿ ತಮ್ಮ ಗೆಲುವಿಗೆ ಶ್ರಮಿಸಬೇಕೆಂದು ಕೋರಿದರು.
ಅಧ್ಯಕ್ಷತೆ ವಹಿಸಿದ್ದ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅನಿಲಕುಮಾರ್ ಪಾಟೀಲ ಮಾತನಾಡಿ, ನಮ್ಮ ಅಭ್ಯರ್ಥಿ ಕುಬೇರಪ್ಪನವರು ಸತತವಾಗಿ ಪದವೀಧರರ ಜೊತೆ ಒಡನಾಟದಲ್ಲಿದ್ದು ಈ ಬಾರಿ ಗೆಲುವು ಶತಸಿದ್ದ ಎಂದರು.
ಪಕ್ಷದಲ್ಲಿ ಎಲ್ಲ ಬ್ಲಾಕ್ ಮುಖಂಡರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಶ್ರಮ ವಹಿಸಬೇಕೆಂದು ಕರೆ ನೀಡಿದರು.
ಕೆಪಿಸಿಸಿ ಸದಸ್ಯ ಎಸ್.ಆರ್.ಪಾಟೀಲ, ಕಲಘಟಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಮುರಳ್ಳಿ, ನಿಂಗರೆಡ್ಡಿ ನಡುವಿನಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.