Karnataka Voice

Latest Kannada News

ಹಾವೇರಿ: ಅಂಬೇಡ್ಕರ ನಿಗಮದ ಸಹಾಯಕ ಎಸಿಬಿ ಬಲೆಗೆ

ಹಾವೇರಿ: ಪರಿಶಿಷ್ಟ ಜಾತಿಯವರಿಗೆ ಜಮೀನು ಕೊಡುವ ಸಂಬಂಧವಾಗಿ ಲಂಚ ಕೇಳಿದ್ದ ಹಾವೇರಿಯ ಅಂಬೇಡ್ಕರ ಅಭಿವೃದ್ಧಿ ನಿಗಮದ ಪ್ರಥಮ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾನೆ.

ಪ್ರಥಮ ದರ್ಜೆ ಸಹಾಯಕ ತಿಪ್ಪೇಸ್ವಾಮಿ, ಇಪ್ಪತ್ತೈದು ಸಾವಿರ ರುಪಾಯಿ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಯಲ್ಲಿ ಸಿಲುಕಿದ್ದಾರೆ. ಸಿದ್ದಪ್ಪ ಲಮಾಣಿ ಎಂಬುವರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.

ಪರಿಶಿಷ್ಟ ಜಾತಿಯವರಿಗೆ ನೀಡುವ ಜಮೀನು ಮಂಜೂರಾತಿಗೆ ಸಂಬಂಧಿಸಿದಂತೆ ಸಿದ್ದಪ್ಪ ಲಮಾಣಿ ಎಂಬುವವರಿಗೆ ಲಂಚಕ್ಕಾಗಿ ಪೀಡಿಸುತ್ತಿದ್ದ ತಿಪ್ಪೆಸ್ವಾಮಿಯ ಬಂಡವಾಳ ಈ ಮೂಲಕ ಬಯಲಾಗಿದೆ. ಎಪ್ಪತ್ತೈದು ಸಾವಿರ ರುಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಥಮ ದರ್ಜೆ ಸಹಾಯಕ, 25 ಸಾವಿರ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ.

ಜಿಲ್ಲಾಡಳಿತ ಭವನದಲ್ಲಿರೋ ನಿಗಮದ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಡಿವೈಎಸ್ಪಿ ಸೋಮಲಿಂಗ ಕುಂಬಾರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Leave a Reply

Your email address will not be published. Required fields are marked *