Posts Slider

Karnataka Voice

Latest Kannada News

ವರೂರ ಬಳಿ ಕಾರು ಪಲ್ಟಿ: ಯುವಕ-ಮಹಿಳೆ ದುರ್ಮರಣ… ಯಾರವರು ಗೊತ್ತಾ…!?

1 min read
Spread the love

Exclusive

ವರೂರು ಬಳಿ ಭೀಕರ ರಸ್ತೆ ಅಪಘಾತ ಇಬ್ಬರ ದುರ್ಮರಣ; ಓರ್ವನ ಸ್ಥಿತಿ ಗಂಭೀರ

ಹುಬ್ಬಳ್ಳಿ: ಪುನಾ-ಬೆಂಗಳೂರು ರಸ್ತೆಯ ವರೂರು ಬಳಿಯ ಗಣೇಶ ಹೋಟೆಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟು,ಇನ್ನೊಬ್ಬ ಗಂಭೀರವಾಗಿ ಗಾಯಗೊಂಡು,ಓರ್ವ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಮಧ್ಯರಾತ್ರಿ ಒಂದು ಗಂಟೆಗೆ ನಡೆದಿದೆ.

ದಾವಣಗೆರೆ ಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರಿನಲ್ಲಿ ನಾಲ್ಕು ಜನ ಪ್ರಯಾಣವನ್ನು ಮಾಡುತ್ತಿದ್ದಾಗ ವರೂರು ಬಳಿಯ ಗಣೇಶ ಹೋಟೆಲ್ ಬಳಿ ಅತಿವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವನಪ್ಪಿದರೆ,ಇನ್ನೊಬ್ಬ ಮಹಿಳೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾಳೆ,ಇನ್ನೊಬ್ಬ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು ಆತನ ಸ್ಥಿತಿ ಕೂಡಾ ಗಂಭೀರವಾಗಿದೆ.

ಕಾರಿನಲ್ಲಿದ್ದ ನಾಲ್ವರ ಪೈಕಿ ಮೂರು ಜನ ದಾವಣಗೆರೆ ಮೂಲದ ಶಾರುಖ್, ಸೋಹೆಲ್, ಪಾರುಕ್ ಎಂದು ತಿಳಿದು ಬಂದಿದ್ದು,ಮೃತಪಟ್ಟ ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ,ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ರಮೇಶ ಗೋಕಾಕ ಭೇಟಿ ನೀಡಿ,ಶವವನ್ನು ಕಿಮ್ಸ್ ಶವಾಗಾರಕ್ಕೆ ರವಾನಿಸಿದ್ದಾರೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

Leave a Reply

Your email address will not be published. Required fields are marked *