Karnataka Voice

Latest Kannada News

ಕಾರವಾರ ಬಳಿ ಧಾರವಾಡ ಕಾರು, ಹುಬ್ಬಳ್ಳಿ ಬಸ್ ಡಿಕ್ಕಿ: 1ಸಾವು, ನಾಲ್ವರ ಸ್ಥಿತಿ ಗಂಭೀರ..!

ಕಾರವಾರ: ಕಾರು ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರವಾರ ಜಿಲ್ಲೆಯ ಅಂಕೋಲಾ ತಾಲೂಕಿನ ಮಾಸ್ತಿಕಟ್ಟಾ ಬಳಿ  ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಅಂಕೋಲಾದಿಂದ ಹುಬ್ಬಳ್ಳಿ ತೆರಳುತ್ತಿದ್ದ ಕಾರು ಹಾಗೂ ಗದಗದಿಂದ ಕಾರವಾರಕ್ಕೆ ಆಗಮಿಸುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಧಾರವಾಡ ಮೂಲದ ಐವರ ಪೈಕಿ ಓರ್ವ ಮಹಿಳೆ ಮೃತಪಟ್ಟಿದ್ದು, ನಾಲ್ವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮುಂಭಾಗ ಕೂಡಾ ಜಖಂಗೊಂಡಿದ್ದು, ಗದಗ-ಹುಬ್ಬಳ್ಳಿ-ಕಾರವಾರ ಸಂಚರಿಸುತ್ತಿದ್ದ ಬಸ್ಸಾಗಿದೆ. ಘಟನೆಯ ನಡೆಯುತ್ತಿದ್ದಂತೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಗಾಬರಿಯಾಗಿ ಕೆಳಗೆ ಇಳಿದರು.

ಅಪಘಾತ ತಿಳಿಯುತ್ತಿದ್ದಂತೆ ಸಹಾಯಕ್ಕೆ ಆಗಮಿಸಿದ ಹೈವೆ ಪೆಟ್ರೋಲಿಂಗ್ ಸಿಬ್ಬಂದಿ ಹಾಗೂ ಸ್ಥಳೀಯರು ತಕ್ಷಣ ಗಾಯಾಳುಗಳನ್ನು ಕಾರವಾರ ಕ್ರಿಮ್ಸ್ ಗೆ ಕಳುಹಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನಲ್ಲಿದ್ದ ಮೇಘಾ( 28), ಯು.ಬಿ ಮೆಸ್ತಾ(39) ಚಾಲಕ ಮುಲ್ಲಾ (31) ಸ್ಥಿತಿ ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಕಾರಿನಲ್ಲಿದ್ದವರು ಧಾರವಾಡ ಮೂಲದವರೆಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಧಾರವಾಡದ ಕೃಷಿ ವಿಶ್ವ ವಿದ್ಯಾಲಯದ ಉದ್ಯೋಗಿಗಳು ಎಂದು ತಿಳಿದು ಬಂದಿದ್ದು, ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *