ಶವ ಸಂಸ್ಕಾರಕ್ಕೆ ಹೋಗಿದ್ದ “ರೋಜಾ” ದಲ್ಲಿದ್ದ ಮಹಿಳೆ ಹೆಬ್ಬಳ್ಳಿ ಅಗಸಿಯಲ್ಲಿ ದುರ್ಮರಣ…!

ಧಾರವಾಡ: ರಂಜಾನ್ ರೋಜಾ ಉಪವಾಸದಲ್ಲಿದ್ದ ಮಹಿಳೆಯೋರ್ವಳು ಅಣ್ಣಿಗೇರಿ ಪಟ್ಟಣದಲ್ಲಿ ಶವ ಸಂಸ್ಕಾರಕ್ಕೆ ಹೋಗಿ ಮರಳಿ ಬರುತ್ತಿದ್ದ ಸಮಯದಲ್ಲಿ ಧಾರವಾಡದ ಹೆಬ್ಬಳ್ಳಿ ಅಗಸಿಯಲ್ಲಿ ಬೈಕಿನಿಂದ ಬಿದ್ದು ಸಾವಿಗೀಡಾದ ಘಟನೆ ನಡೆದಿದೆ.

ಧಾರವಾಡ ಹಾವೇರಿಪೇಟೆ ನಿವಾಸಿಯಾದ ಮಮ್ತಾಜ್ ಜೆಲಾನಿ ಲಕಮಾಪುರ ಎಂಬ 54 ವಯಸ್ಸಿನ ಮಹಿಳೆಯೇ ಸಾವಿಗೀಡಾಗಿದ್ದಾಳೆ. ತನ್ನ ಮಗನೊಂದಿಗೆ ಬೈಕಿನಲ್ಲಿ ಶವ ಸಂಸ್ಕಾರಕ್ಕೆ ಹೋಗಿ ಬರುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ನಡೆದಿದೆ.
ಬೈಕಿನಿಂದ ಬಿದ್ದ ಸಮಯದಲ್ಲಿ ತೀವ್ರವಾದ ರಕ್ತಸ್ರಾವವಾಗಿತ್ತು. ತಕ್ಷಣವೇ ಆಸ್ಪತ್ರೆಗೆ ರವಾನೆ ಮಾಡಲಾಯಿತಾದರೂ, ಚಿಕಿತ್ಸೆ ಫಲಿಸದೆ ಮಮ್ತಾಜ್ ಸಾವಿಗೀಡಾಗಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದ ಹಾಗೇ ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಸಂಚಾರಿ ಠಾಣೆಯ ಪೊಲೀಸರು, ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.