ಧಾರವಾಡದಲ್ಲಿ “ಗರಗ PHC ಡಾಕ್ಟರ್” ದುರ್ಮರಣ…

ಧಾರವಾಡ: ವೇಗವಾಗಿ ಬಂದ ಕಾರು ಸಾರಿಗೆ ಸಂಸ್ಥೆಯ ಬಸ್ಸಿಗೆ ಹಿಂಭಾಗ ಡಿಕ್ಕಿ ಹೊಡೆದ ಪರಿಣಾಮ ಸರಕಾರಿ ಆಸ್ಪತ್ರೆಯ ವೈದ್ಯರು ಸಾವಿಗೀಡಾದ ಘಟನೆ ನಗರದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.

ಮೃತ ವೈದ್ಯ ಡಾ.ರಾಜಶೇಖರ ಪತ್ತಾರ ಧಾರವಾಡ ತಾಲೂಕಿನ ಗರಗ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಗರಗ ಗ್ರಾಮಕ್ಕೆ ಮರಳಿ ಹೋಗುವಾಗ ದುರ್ಘಟನೆ ನಡೆದಿದೆ. ತಕ್ಷಣ ಅವರನ್ನ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.
ಧಾರವಾಡ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಎಚ್ಓ ಸೇರಿದಂತೆ ಹಲವು ಅಧಿಕಾರಿಗಳು ಆಸ್ಪತ್ರೆಗೆ ದೌಡಾಯಿಸಿದ್ದು, ಮುಂದಿನ ಕ್ರಮವನ್ನ ತೆಗೆದುಕೊಂಡಿದ್ದಾರೆ.