ಧಾರವಾಡಕ್ಕೆ ಕರಾಳ ದಿನ: 6 ಗೆಳೆಯರ ದುರ್ಮರಣ- ಘಟನೆಯ ಸಂಪೂರ್ಣ ವಿವರ ಇಲ್ಲಿದೆ ನೋಡಿ…
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಗುರುವಾರ ಮುಂಜಾನೆ ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆರು ಮಂದಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಧಾರವಾಡ ಮೂಲದ ಇವರೆಲ್ಲರೂ ಜೊಮ್ಯಾಟೊ ಸಂಸ್ಥೆಯ ಉದ್ಯೋಗಿಗಳಾಗಿದ್ದು, ಸ್ನೇಹಿತರೊಂದಿಗೆ ಗೋಕರ್ಣ, ಮುರುಡೇಶ್ವರ ಪ್ರವಾಸ ಮುಗಿಸಿ ಧರ್ಮಸ್ಥಳ ಹಾಗೂ ಚಿಕ್ಕಮಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದರು. ಅಂಕೋಲಾ ಮಾರ್ಗವಾಗಿ ಚಲಿಸುತ್ತಿದ್ದಾಗ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತರನ್ನು ಬಸವರಾಜ್ (48), ಅಭಿಷೇಕ್ ಈಶ್ವರ್ (28), ಅಕ್ಷಯ್ (26), ಅಭಿಷೇಕ್ (26) ಮತ್ತು ಚಾಲಕ ಸಂಜೀವ ಅಂಗಡಿ (33) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಶಿವರಾಜ್ (22), ಮಂಜುನಾಥ್ (32) ಹಾಗೂ ಸಚಿನ್ (28) ಅವರನ್ನು ತಕ್ಷಣವೇ ಯಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
