Posts Slider

Karnataka Voice

Latest Kannada News

ಹುಬ್ಬಳ್ಳಿ ಪ್ರೆಸಿಡೆಂಟ್ ಹೊಟೇಲ್ ಹತ್ತಿರ ಭೀಕರ ಅಪಘಾತ- ಇಬ್ಬರು ಯುವಕರ ದುರ್ಮರಣ..!

1 min read
Spread the love

ಹುಬ್ಬಳ್ಳಿ: ವೇಗವಾಗಿ ಹೋಗುತ್ತಿದ್ದ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಯುವಕರು ಧಾರುಣವಾಗಿ ಸಾವಿಗೀಡಾದ ಘಟನೆ ಬುಧವಾರ ರಾತ್ರಿ ನಡೆದಿದೆ.

ನಗರದಿಂದ ಹೋಗುತ್ತಿದ್ದ ಯುವಕರು ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ನಿಯಂತ್ರಣ ತಪ್ಪಿದೆ. ಹೀಗಾಗಿ ರಸ್ತೆಯಲ್ಲಿ ಬಿದ್ದ ಪರಿಣಾಮ, ಸ್ಥಳದಲ್ಲಿಯೇ ತೀವ್ರವಾದ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ.

ಘಟನೆ ನಡೆಯುತ್ತಿದ್ದ ಹಾಗೇ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ, ಯುವಕರನ್ನ ಕಿಮ್ಸಗೆ ರವಾನೆ ಮಾಡಲಾಗಿತ್ತಾದರೂ, ಯಾವುದೇ ಪ್ರಯೋಜನವಾಗಿಲ್ಲ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.

ಘಟನೆಯಲ್ಲಿ ಸಾವಿಗೀಡಾದವರನ್ನ ಹಾವೇರಿಯ ನವೀನ ಮತ್ತು ಹಳೇಹುಬ್ಬಳ್ಳಿಯ ಗಿರೀಶ ಎಂದು ಗುರುತಿಸಲಾಗಿದೆ.


Spread the love

Leave a Reply

Your email address will not be published. Required fields are marked *

You may have missed