ಹುಬ್ಬಳ್ಳಿ ಇಂದಿರಾನಗರದಲ್ಲಿ ಬ್ಯಾರಿಕೇಡ್ ಗೆ ಸ್ಕೂಟಿ ಡಿಕ್ಕಿ: ಇಬ್ಬರು ಯುವಕರ ಸ್ಥಿತಿ ಅಯೋಮಯ…!

ಹುಬ್ಬಳ್ಳಿ: ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಅಂಟಿಕೊಂಡಿರುವ ಇಂದಿರಾನಗರದ ಬಳಿ ವೇಗವಾಗಿ ಚಲಿಸುತ್ತಿದ್ದ ಸ್ಕೂಟಿ ನಿಯಂತ್ರಣ ತಪ್ಪಿ ಪೊಲೀಸರ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಘಟನೆ ಈಗಷ್ಟೇ ನಡೆದಿದ್ದು, ಸಾರ್ವಜನಿಕರು ಇಬ್ಬರು ಯುವಕರನ್ನ ಆಟೋದ ಮೂಲಕ ಆಸ್ಪತ್ರೆಗೆ ರವಾನೆ ಮಾಡಿದ್ರು.

ಬಂಕಾಪೂರ ಚೌಕದಿಂದ ವೇಗವಾಗಿ ಸ್ಕೂಟಿ ಚಲಾಯಿಸಿದ ಯುವಕರು ಬ್ಯಾರಿಕೇಡಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಸ್ಕೂಟಿ ಸಂಪೂರ್ಣವಾಗಿ ಜಖಂಗೊಂಡು ಇಬ್ಬರು ಯುವಕರು ತೀವ್ರವಾಗಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದರು. ತಕ್ಷಣವೇ ಆಟೋದ ಮೂಲಕ ಗಾಯಾಳುಗಳನ್ನ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.