Posts Slider

Karnataka Voice

Latest Kannada News

ಹುಬ್ಬಳ್ಳಿ ಬೈಪಾಸ್ ನಲ್ಲಿ ಖಾಸಗಿ ಬಸ್-ಲಾರಿ ಭೀಕರ ಅಪಘಾತ: 6 ಸಾವು, 26 ಜನರಿಗೆ ಗಾಯ…

1 min read
Spread the love

ಹುಬ್ಬಳ್ಳಿ Exclusive

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಬಾಡ ಗ್ರಾಮದ ಬಳಿಯಲ್ಲಿ ನಡೆದ ಅಪಘಾತ ಮರೆಯುವದರೊಳಗೆ ಹುಬ್ಬಳ್ಳಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.

ಹು-ಧಾ ಬೈಪಾಸ್ ನಲ್ಲಿನ ರೇವಡಿಹಾಳ ಬಳಿಯಲ್ಲಿ ಖಾಸಗಿ ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನ ಸ್ಥಳದಲ್ಲೇ ಮೃತಪಟ್ಟು,26 ಜನ ಗಾಯಗೊಂಡ ಘಟನೆ ಮಂಗಳವಾರ ಮಧ್ಯರಾತ್ರಿ ಸಂಭವಿಸಿದೆ.

ಕೊಲ್ಲಾಪುರದಿಂದ ಬೆಂಗಳೂರಿನತ್ತ ಹೊರಟಿದ್ದ ಖಾಸಗಿ ಬಸ್,ಹಾಗೂ ಬೆಂಗಳೂರಿನಿಂದ ಪುನಾ ಕಡೆ ಹೊರಟಿದ್ದ ಲಾರಿಯ ನಡುವೆ ಅಪಘಾತ ಸಂಭವಿಸಿದ್ದು,ಬಸ್ ಚಾಲಕ ಟ್ರ್ಯಾಕ್ಟರ್ ಓವರಟೇಕ್ ಮಾಡಲು ಹೋದಾಗ ಅವಘಡ ಸಂಭವಿಸಿದೆ.

ಅಪಘಾತ ಸಂಭವಿಸುತ್ತಿದ್ದ ಹಾಗೇ ಬೈಪಾಸ್ ಹೆದ್ದಾರಿ ಬಂದ್ ಆಗಿದ್ದು ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸ್ ಕಮೀಷನರ್ ಲಾಬುರಾಮ್ ಅಪಘಾತದಲ್ಲಿ ಗಾಯಗೊಂಡ 26 ಜನರನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯವನ್ನು ಮಾಡಿದ್ದು, ಅಪಘಾತವಾದ ವಾಹನಗಳನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕಿ ತನಿಖೆಯನ್ನು ನಡೆಸುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *