Posts Slider

Karnataka Voice

Latest Kannada News

ಹುಬ್ಬಳ್ಳಿ ಶ್ರೀನಗರ ಕ್ರಾಸ್ ಬಳಿಯಲ್ಲಿ ಸರಣಿ ಅಪಘಾತ…!

1 min read
Spread the love

ಹುಬ್ಬಳ್ಳಿ: ನಗರದ ಶ್ರೀನಗರ ಕ್ರಾಸ್ ಬಳಿಯಲ್ಲಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂರು ವಾಹನಗಳು ಜಖಂಗೊಂಡು, ವಾಹನ ಸವಾರರು ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ.

ಶ್ರೀನಗರ ಕ್ರಾಸ್ ನಲ್ಲಿ ನಿಂತಿದ್ದ ಬೋಲೆರೋ ವಾಹನ, ಇದರ ಹಿಂದೆ ನಿಂತಿದ್ದ ಸ್ವಿಫ್ಟ್ ಕಾರಿಗೆ ವೇಗವಾಗಿ ಬಂದ ಇಂಡಿಕಾ ಕಾರೊಂದು ಡಿಕ್ಕಿ ಹೊಡೆದಿದೆ. ಇದರಿಂದ ಮೂರು ವಾಹನಗಳು ಜಖಂಗೊಂಡಿವೆ.

ಇಂಡಿಕಾ ಕಾರಿನ ಚಾಲಕನ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದ್ದರಿಂದ ಚಾಲಕರು ಸ್ಥಳದಲ್ಲಿಯೇ ಹೊಡೆದಾಡಿಕೊಂಡಿದ್ದು, ಅಷ್ಟರಲ್ಲಿಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿಯನ್ನ ನೀಡಿದ್ದಾರೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಉತ್ತರ ಸಂಚಾರಿ ಪೊಲೀಸರು ಅಪಘಾತವಾದ ಮೂರು ವಾಹನಗಳನ್ನು ಠಾಣೆಗೆ ತೆಗೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *