Posts Slider

Karnataka Voice

Latest Kannada News

ಹುಬ್ಬಳ್ಳಿ-ಧಾರವಾಡದಲ್ಲಿ ಮತ್ತೆರಡು ಅಪಘಾತ: ಮ್ಯಾನೇಜರ್ ಸೇರಿ ಇಬ್ಬರ ಸಾವು…!

1 min read
Spread the love

ಧಾರವಾಡ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರಸ್ತೆಯಲ್ಲಿ ನೀರು ನಿಂತು ಸ್ಕೂಟಿ ಸ್ಕೀಡ್ ಆದ ಪರಿಣಾಮ ನಗರದ ಹೊರವಲಯದಲ್ಲಿ ಖಾಸಗಿ ಕಂಪನಿಯ ಮ್ಯಾನೇಜರೋರ್ವರು ಸಾವಿಗೀಡಾದ ಘಟನೆ ನಡೆದಿದೆ.

ಶಿಲ್ಪಾ ಮೆಡಿಕೇರ್ ಲಿಮಿಟೆಡ್ ನ ಮ್ಯಾನೇಜರ್ ದೇವ ಮೈಲೇಶ್ವರಯ್ಯ ಎಂಬುವವರೇ ಘಟನೆಯಲ್ಲಿ ಸಾವಿಗೀಡಾಗಿದ್ದಾರೆ. ಕಂಪನಿಗೆ ಹೋಗಿ ಮರಳಿ ಬರುವ ಸಮಯದಲ್ಲಿ ಘಟನೆ ನಡೆದಿದ್ದು, ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.

ಹುಬ್ಬಳ್ಳಿಯ ತಾರಿಹಾಳ ಬಳಿಯಲ್ಲಿ ಬೈಕಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವಿಗೀಡಾದ ಘಟನೆ ನಡೆದಿದೆ.

ಬೈಪಾಸ್ ರಸ್ತೆಯಲ್ಲಿ ಬರುತ್ತಿದ್ದ ವೇಳೆಯಲ್ಲಿ ಲಾರಿಯು ಡಿಕ್ಕಿ ಹೊಡೆದಿದ್ದು, ಯುವಕನ ತಲೆಗೆ ಗಂಭೀರವಾಗಿ ಗಾಯವಾಗಿ, ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಪ್ರಕರಣವನ್ನ ದಾಖಲು ಮಾಡಿಕೊಂಡಿರುವ ಪೊಲೀಸರು, ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *