Posts Slider

Karnataka Voice

Latest Kannada News

ಹುಬ್ಬಳ್ಳಿ ಹೊರವಲಯದಲ್ಲಿ “ಲಾರಿಯಲ್ಲೇ ಶವ”- ಪೊಲೀಸರ ದೌಡು…

Spread the love

ಹುಬ್ಬಳ್ಳಿ: ನಗರದ ಹೊರವಲಯದ ಬೈಪಾಸ್ ನಲ್ಲಿ ಚಲಿಸುತ್ತಿದ್ದ ಲಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ನಡೆದಿದ್ದು, ಚಾಲಕ ಕೂತ ಜಾಗದಲ್ಲಿಯೇ ಸಾವಿಗೀಡಾಗಿದ್ದಾನೆ.

ಆಂದ್ರಪ್ರದೇಶ ಮೂಲದ ಲಾರಿಯೂ ಕಟ್ಟಿಗೆಯನ್ನ ಹೇರಿಕೊಂಡು ದಾಂಡೇಲಿಯತ್ತ ಹೋಗುವ ಸಮಯದಲ್ಲಿ ಘಟನೆ ನಡೆದಿದ್ದು, ಯಾವ ಸಮಯದಲ್ಲಿ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಸಿಕ್ಕಿಲ್ಲ.

ಘಟನೆಯ ಮಾಹಿತಿ ಸಿಗುತ್ತಿದ್ದ ಹಾಗೇ ಪೊಲೀಸರು ಸ್ಥಳಕ್ಕೆ ದೌಡಾಯಿಸುತ್ತಿದ್ದು, ಪರಿಶೀಲನೆಯನ್ನ ನಡೆಸುತ್ತಿದ್ದಾರೆ. ಚಾಲಕನ ಶವ ಇನ್ನೂ ಲಾರಿಯಲ್ಲಿದ್ದು, ಅದನ್ನ ಕಿಮ್ಸಗೆ ರವಾನೆ ಮಾಡಲಿದ್ದಾರೆ.

ಬೆಳಿಗ್ಗೆ ಮಂಜು ಕವಿದ ಸಮಯದಲ್ಲಿ ದುರ್ಘಟನೆ ನಡೆದಿದೆ ಎಂಬ ಶಂಕೆಯಿದ್ದು, ಪರಾರಿಯಾಗಿರುವ ವಾಹನದ ಮಾಹಿತಿ ಕಲೆ ಹಾಕಲು ಪೊಲೀಸರು ಮುಂದಾಗಿದ್ದಾರೆ.


Spread the love

Leave a Reply

Your email address will not be published. Required fields are marked *