Karnataka Voice

Latest Kannada News

ಹುಬ್ಬಳ್ಳಿ: ಶಿರಗುಪ್ಪಿ ಬಳಿ ನಿಂತ ಲಾರಿಗೆ ಕಾರು ಡಿಕ್ಕಿ ಇಬ್ಬರ ದುರ್ಮರಣ…

ಹುಬ್ಬಳ್ಳಿ: ನಿಂತ ಲಾರಿಯೊಂದಕ್ಕೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಬಳಿ ನಡೆದಿದ್ದು, ಇಬ್ಬರು ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ.

 

ತೆಲಂಗಾಣ ಮೂಲದ ಕಾರು, ಲಾರಿಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಹಾಗೂ ಆತನ ಹಿಂದೆ ಕುಳಿತ ವ್ಯಕ್ತಿ ಸಾವಿಗೀಡಾಗಿದ್ದು, ಕಾರಿನ ಬಲಭಾಗದಲ್ಲಿ ಕುಳಿತ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಮೃತಪಟ್ಟವರ ಸಂಪೂರ್ಣ ಮಾಹಿತಿ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *