ನೂಲ್ವಿ ಕ್ರಾಸ್ ಬಳಿ ಅಪಘಾತ: ಇಬ್ಬರು ನಿವೃತ್ತ ಶಿಕ್ಷಕರು ದುರ್ಮರಣ…

ಹುಬ್ಬಳ್ಳಿ: ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸ್ಕೂಟಿಯಲ್ಲಿ ಬರುತ್ತಿದ್ದ ಇಬ್ಬರು ನಿವೃತ್ತ ಶಿಕ್ಷಕರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ನೂಲ್ವಿ ಕ್ರಾಸ್ ಬಳಿ ನಡೆದಿದ್ದು, ಇಬ್ಬರು ಸಾವಿಗೀಡಾದ ಘಟನೆ ಸಂಭವಿಸಿದೆ.

ದೈಹಿಕ ಶಿಕ್ಷಣ ಶಿಕ್ಷಕರುಗಳಾಗಿದ್ದ ಡಿ.ಬಿ.ಹರಕುಣಿ ಹಾಗೂ ಸಕ್ರನಾಯ್ಕರ್ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗಲೇ ಸಾವಿಗೀಡಾಗಿದ್ದಾರೆ.

ತಮ್ಮ ನಿವೃತ್ತಿಯ ಸಮಯದಲ್ಲಿ ಒಬ್ಬರಿಗೊಬ್ಬರು ಬಾಂಧವ್ಯವನ್ನ ಮುಂದುವರೆಸಿಕೊಂಡು ಹೋಗುತ್ತಿದ್ದಾಗಲೇ ಇಂತಹ ದುರ್ಘಟನೆ ನಡೆದಿದೆ. ಮೃತರ ಮರಣೋತ್ತರ ಪರೀಕ್ಷೆ ನಡೆಸಿ, ಅಮರಗೋಳದ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗಿದೆ.