Posts Slider

Karnataka Voice

Latest Kannada News

ಕಲಘಟಗಿ ಬಳಿ “ಮೋದಿ ಕಾರ್ಯಕ್ರಮ”ಕ್ಕೆ ಬಂದವರ ಸರಣಿ ಅಪಘಾತ- ಇಬ್ಬರ ಸ್ಥಿತಿ ಗಂಭೀರ, ಹಲವರಿಗೆ ಗಾಯ…..

Spread the love

ಕಲಘಟಗಿ: ಯುವ ಜನೋತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ ಸಂದರ್ಭದಲ್ಲಿ ಹುಬ್ಬಳ್ಳಿಗೆ ಆಗಮಿಸಿದ್ದ ಜನರು ಮರಳಿ ಹೋಗುವಾಗ ಸರಣಿ ಅಪಘಾತ ರಾಮನಾಳದ ಬಳಿ ನಡೆದಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿ, ಹಲವರು ಗಾಯಗೊಂಡ ಘಟನೆ ನಡೆದಿದೆ.

ಹುಬ್ಬಳ್ಳಿಯ ಕಾರ್ಯಕ್ರಮ ಮುಗಿಸಿ ಮರಳಿ ಹೋಗುತ್ತಿದ್ದಾಗ ದುರ್ಘಟನೆ ನಡೆದಿದ್ದು, ಬಸ್, ಟಾಟಾ ಏಸ್, ಆಟೋ, ಲಾರಿ ಹಾಗೂ ಮತ್ತೊಂದು ಲಾರಿಯ ನಡುವೆ ಅಪಘಾತ ಸಂಭವಿಸಿದ್ದು, ಬಹುತೇಕ ವಾಹನಗಳು ಜಖಂಗೊಂಡಿವೆ.

ಘಟನೆಯಲ್ಲಿ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮಾಹಿತಿಯನ್ನ ಕಲೆ ಹಾಕಲಾಗುತ್ತಿದೆ.

ಕಲಘಟಗಿ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.


Spread the love

Leave a Reply

Your email address will not be published. Required fields are marked *