ಹುಬ್ಬಳ್ಳಿಯ ಕಾಡಸಿದ್ಧೇಶ್ವರ ಕಾಲೇಜು ಬಳಿ ದುರ್ಘಟನೆ: ಮಹಿಳೆ ದುರ್ಮರಣ, ಯುವಕನ ಸ್ಥಿತಿ ಗಂಭೀರ…!
1 min readಹುಬ್ಬಳ್ಳಿ: ವಿದ್ಯಾನಗರದ ಕಾಡಸಿದ್ದೇಶ್ವರ ಕಾಲೇಜ್ ಮುಂದಿನ ರಸ್ತೆಯಲ್ಲಿ ಲಾರಿಗೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಮಹಿಳೆ ಸಾವಿಗೀಡಾಗಿದ್ದು, ಸವಾರನಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.
ಶಿರೂರು ಪಾರ್ಕಿನಿಂದ ಬೈಕಿನಲ್ಲಿ ಬರುತ್ತಿದ್ದ ಮಹಿಳೆ ಹಾಗೂ ಯುವಕನಿಗೆ ಲಾರಿಯು ತಾಗಿದ್ದು, ನಿಯಂತ್ರಣ ತಪ್ಪಿ ಮಹಿಳೆಯು ಲಾರಿಯ ಚಕ್ರದಡಿಯೇ ಬಿದ್ದು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಬೈಕ್ ಸವಾರನಿಗೂ ಗಾಯಗಳಾಗಿದ್ದು, ಆತನನ್ನ ಕಿಮ್ಸ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಉತ್ತರ ಸಂಚಾರಿ ಠಾಣೆಯ ಪೊಲೀಸರು ಎರಡು ವಾಹನಗಳನ್ನ ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.
ಮೃತ ಮಹಿಳೆಯನ್ನ ಬಸಮ್ಮ ಎಂದು ಗುರುತಿಸಲಾಗಿದೆ.