ಎಐಎಂಐಎಂ ಮುಖಂಡ ವಿಜಯ ಗುಂಟ್ರಾಳ ಮೇಲೆ ಹಲ್ಲೆ…!
1 min readಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಹೊರ ಬಂದಿದ್ದೆ ತಡ, ಸೋತ ಕಾಂಗ್ರೆಸ್ ಅಭ್ಯರ್ಥಿಯ ಪತಿಯೋರ್ವ ಎಐಎಂಐಎಂ ಅಭ್ಯರ್ಥಿಯ ಪತಿಯ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಕರ್ಕಿಬಸವೇಶ್ವರ ನಗರದಲ್ಲಿ ನಡೆದಿದೆ.
ಮಹಾನಗರ ಪಾಲಿಕೆಯ ವಾರ್ಡ್ ನಂಬರ 69ರಲ್ಲಿ ಶ್ರೀನಿವಾಸ ಬೆಳದಡಿಯವರ ಮನೆಯವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಅದೇ ವಾರ್ಡಿನಲ್ಲಿ ವಿಜಯ ಗುಂಟ್ರಾಳ ತಮ್ಮ ಮಡದಿಯನ್ನ ಎಐಎಂಐಎಂ ಅಭ್ಯರ್ಥಿಯನ್ನಾಗಿಸಿದ್ದರು. ಫಲಿತಾಂಶದಲ್ಲಿ ಪಕ್ಷೇತರ ಅಭ್ಯರ್ಥಿಯ ಗೆಲುವಾಗಿದೆ.
ಸೋತ ಕಾಂಗ್ರೆಸ್ ಅಭ್ಯರ್ಥಿಯ ಪತಿ ಶ್ರೀನಿವಾಸ, ತಮ್ಮ ಸೋಲಿಗೆ ವಿಜಯ ಗುಂಟ್ರಾಳನೇ ಕಾರಣವೆಂದು ಹಲ್ಲೆ ಮಾಡಿದ್ದಾರೆಂದು ಹೇಳಲಾಗಿದ್ದು, ಗುಂಟ್ರಾಳಗೆ ಪೆಟ್ಟಾಗಿದೆ ಎನ್ನಲಾಗಿದೆ.
ಘಟನೆ ನಡೆಯುತ್ತಿದ್ದ ಹಾಗೇ ಸ್ಥಳಕ್ಕೆ ತೆರಳಿದ ಡಿಸಿಪಿ, ಹಲವರನ್ನ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಎಐಎಂಐಎಂ ಸಾಕಷ್ಟು ವಾರ್ಡಗಳಲ್ಲಿ ಮರ್ಮಾಘಾತವನ್ನ ನೀಡಿದ್ದನ್ನ ಇಲ್ಲಿ ಸ್ಮರಿಸಬಹುದಾಗಿದೆ.