Posts Slider

Karnataka Voice

Latest Kannada News

ಹುಬ್ಬಳ್ಳಿ: ಪೆಟ್ರೋಲ್ ಬಂಕ್ ಲ್ಲಿ “ತಲ್ವಾರ-ರಾಡ್”ನಿಂದ ಹಲ್ಲೆ: ಜೀವನ್ಮರಣದ ನಡುವೆ ಸರ್ದಾಜಿ…!

Spread the love

ಹುಬ್ಬಳ್ಳಿ:  ತಾಲೂಕಿನ ಅಂಚಟಗೇರಿ ಪೆಟ್ರೋಲ್ ಬಂಕ್ ನಲ್ಲಿ ಲಾರಿಯ ಚಾಲಕನೋರ್ವನಿಗೆ ತಲ್ವಾರ ಹಾಗೂ ರಾಡಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಕೆಲವೇ ಸಮಯದ ಹಿಂದೆ ನಡೆದಿದೆ.

ಅಂಚಟಗೇರಿಯ ಪರಶುರಾಮ ಪೆಟ್ರೋಲ್ ಬಂಕ್ ಸಮೀಪದಲ್ಲಿಯೇ ದುರ್ಘಟನೆ ನಡೆದಿದ್ದು, ಸುನೀಲ ಚೆಲವರಂ ಎಂಬ ಸರ್ದಾಜಿಗೆ ಹೊಡೆಯಲಾಗಿದೆ. ಯಾವ ಕಾರಣಕ್ಕೆ ಹೀಗೆ ಮಾಡಲಾಗಿದೆ ಎಂಬುದು ಗೊತ್ತಾಗಿಲ್ಲ.

ಕೆಲವರ ಪ್ರಕಾರ ಸರ್ದಾಜಿಯನ್ನ ಹೊಡೆದು ಹಣವನ್ನ ದೋಚಿಕೊಂಡು ಪರಾರಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಅತೀವ ರಕ್ತಸ್ರಾವದಿಂದ ಬಳಲುತ್ತಿದ್ದ ಗಾಯಾಳುವನ್ನ ಹುಬ್ಬಳ್ಳಿಯ ಕಿಮ್ಸಗೆ ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಲಾಗಿದೆ.

ಕಿಮ್ಸನ ತುರ್ತು ಚಿಕಿತ್ಸಾ ಘಟಕದಲ್ಲಿಟ್ಟು ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಬೇಕಿದೆ.


Spread the love

Leave a Reply

Your email address will not be published. Required fields are marked *