Posts Slider

Karnataka Voice

Latest Kannada News

ಮೇತ್ರಾಣಿ ಸ್ಟೋನ್ಸ್ ಹಿಂದುಗಡೆ ಕೊಳೆತ ಶವ… ಯಾರದ್ದೂ ಗೊತ್ತಾ…!?

1 min read
Spread the love

ಹುಬ್ಬಳ್ಳಿ: ಗಬ್ಬೂರು ಬೈಪಾಸ್ ಬಳಿಯ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೇತ್ರಾಣಿ ಸ್ಟೋನ್ಸ್ ಹಿಂದುಗಡೆಯಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಸುಮಾರು 40 ರಿಂದ 45 ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದೆ.

Gabbur Bypass

ಅನಾಮಧೇಯ ವ್ಯಕ್ತಿಯು ಕಳೆದ ನಾಲ್ಕೈದು ದಿನಗಳ ಹಿಂದೆಯೇ ಹೊಲದಲ್ಲಿ ಮೃತಪಟ್ಟಿದ್ದಾನೆ. ಸಾವಿಗೆ ನಿಖರವಾದ ಕಾರಣ ಗೊತ್ತಾಗಿಲ್ಲ. ದೇಹವೆಲ್ಲಾ ಸಂಪೂರ್ಣವಾಗಿ ಕೊಳೆತು ಹೋಗಿದ್ದು, ಇಂದು ದುರ್ವಾಸನೆ ಬರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರೊಬ್ಬರು ನೋಡಿ ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅಪರಿಚಿತ ವ್ಯಕ್ತಿಯು ಅನಾರೋಗ್ಯದಿಂದ ಬಂದು ಸಾವಿಗೀಡಾಗಿದ್ದಾನಾ..? ಯಾರಾದರೂ ತಂದು ಹಾಕಿ ಹೋಗಿದ್ದಾರಾ..? ಇಲ್ಲೇ ತಂದು ಏನಾದರೂ ಮಾಡಿದ್ದಾರಾ.. ? ಎಂಬ ಪ್ರಶ್ನೆಗಳು ಮೂಡಿವೆ.

ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಕಸಬಾಪೇಟೆ ಠಾಣೆ ಪೊಲೀಸರು ಶವವನ್ನು ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ ಮಾಡಿಸಿದ್ದಾರೆ. ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದು ಮೃತಪಟ್ಟ ವ್ಯಕ್ತಿ ಯಾರು ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed