“ಕಿಲಾಡಿ ಕಳ್ಳ”ರಿಗೆ ಕೈಕೊಳ ತೊಡಿಸಿದ ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು…!!!

ಧಾರವಾಡ: ಇಪ್ತಿಯಾರ ಕೂಟದಲ್ಲಿ ಭಾಗಿಯಾಗಲು ಹೋಗಿದ್ದ ರೇಷ್ಮಾ ಕಂದಕಲ್ ಅವರ ಮನೆಯನ್ನ ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಕಳ್ಳರಿಬ್ಬರನ್ನ ಹೆಡಮುರಿಗೆ ಕಟ್ಟುವಲ್ಲಿ ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನ ಧಾರವಾಡ ಲಕ್ಷ್ಮೀಗಿರಿಯ ಮಂಜುನಾಥ ಹುಲ್ಲೂರ ಹಾಗೂ ಧಾರವಾಡ ಹೊಸಯಲ್ಲಾಪುರ ನಿವಾಸಿ ವಿನೋದ ಕಿರ್ಗಿ ಎಂದು ಗುರುತಿಸಲಾಗಿದ್ದು, ಆರೋಪಿಗಳಿಂದ 84ಗ್ರಾಂ ಚಿನ್ನ ಮತ್ತು ಮೂರು ಬೈಕ್ಗಳನ್ನ ವಶಕ್ಕೆ ಪಡೆಯಲಾಗಿದೆ.
ವಿದ್ಯಾಗಿರಿ ಠಾಣೆಯ ಇನ್ಸಪೆಕ್ಟರ್ ಸಂಗಮೇಶ ದಿಡಿಗನಾಳ ನೇತೃತ್ವದಲ್ಲಿ ಪಿಎಸ್ಐ ಪ್ರಮೋದ ಎಚ್.ಜಿ, ಐ.ಐ.ಮದರಖಂಡಿ, ಬಿ.ಪಿ.ಧುಮಾಳ, ಎಂ.ಸಿ.ಮಂಕಣಿ, ಬಿ.ಎಂ.ಪಠಾತ್, ಆನಂದ ಬಡಿಗೇರ, ಮಹಾಂತೇಶ ವೈ.ಎಂ, ಲಕ್ಷ್ಮಣ ಲಮಾಣಿ, ಸಾಗರ ಕುಂಕುಮಗಾರ, ರಮೇಶ ಕೊತಂಬ್ರಿ, ಉಷಾ ಎಂ.ಎಚ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಆರೋಪಿಗಳು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆಯಲ್ಲೂ ಕಳ್ಳತನ ಮಾಡಿರುವುದು ಪತ್ತೆಯಾಗಿದೆ. ಕಿಲಾಡಿ ಕಳ್ಳರನ್ನ ಬಂಧಿಸಿದದವರಿಗೆ ಪೊಲೀಸ್ ಕಮೀಷನರ್ ಬಹುಮಾನ ಘೋಷಣೆ ಮಾಡಿದ್ದಾರೆ.