Karnataka Voice

Latest Kannada News

ಹುಬ್ಬಳ್ಳಿಯಲ್ಲಿ ಎಎಸ್ಐಯಿಂದ ಯುವಕನ ಮೇಲೆ ಹಲ್ಲೆ…!?

ಹುಬ್ಬಳ್ಳಿ: ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಂತ ಪೊಲೀಸರು ಕಟ್ಟುನಿಟ್ಟಿನ ಕ್ರಮವನ್ನ ಜರುಗಿಸಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ ಕಮೀಷನರ್ ಲಾಬುರಾಮ್ ಅವರು ಯಾವುದೇ ಕಾರಣಕ್ಕೂ ಹೊಡೆಯಬಾರದೆಂದು ಹೇಳಿದ್ದರೂ ಕೂಡಾ, ನಗರದಲ್ಲಿಂದು ಅಂತಹ ಘಟನೆ ನಡೆದಿದೆ.

ವೀಡಿಯೋ ಇಲ್ಲಿದೆ ನೋಡಿ..

ಈ ಘಟನೆಯಲ್ಲಿ ಆರೋಪ ಮಾಡುತ್ತಿರುವ ಪ್ರಕಾರ ಯುವಕನಿಗೆ ಹೊಡೆದ ಹಿನ್ನೆಲೆಯಲ್ಲಿ ತೀವ್ರ ಗಾಯಗಳಾಗಿವೆ. ಇದನ್ನ ಎಎಸ್ಐ ಗೌರಿಮಠ ಅವರು ನಾನೂ ಹೊಡೆದಿಲ್ಲವೆಂದು ಹೇಳುತ್ತಿದ್ದಾರೆ. ಆದರೆ, ಅಸಲಿಗೆ ನಡೆದದ್ದೇನು ಎಂಬುದನ್ನ ಪೊಲೀಸರು ಪರಿಶೀಲನೆ ನಡೆಸಬೇಕಿದೆ.

ಕಸಬಾಪೇಟೆ ಪ್ರದೇಶದಲ್ಲಿ ಬಂದೋಬಸ್ತ್ ನಡೆಸುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಸತ್ಯಾಸತ್ಯತೆ ಬಗ್ಗೆ ತಿಳಿದುಕೊಳ್ಳಬೇಕಿದೆ.

Leave a Reply

Your email address will not be published. Required fields are marked *